ಎದೆಯಲ್ಲಿದ್ದ ಸಿದ್ದರಾಮಯ್ಯರನ್ನ ಎತ್ತಿ ಸೈಡಿಗಿಟ್ಟಿದ್ದೀನಿ: ಎಂಟಿಬಿ ನಾಗರಾಜ್

Public TV
1 Min Read

ಬೆಂಗಳೂರು: ಅವತ್ತು ಎದೆ ಬಗೆದರೆ ಸಿದ್ದರಾಮಯ್ಯ ಇದ್ದಾರೆ ಅಂತ ಹೇಳಿದ್ದು ನಿಜ. ಆದರೆ ಈಗ ಸಿದ್ದರಾಮಯ್ಯರನ್ನ ಎತ್ತಿ ಸೈಡಿಗಿಟ್ಟಿದ್ದೇನೆ ಎಂದು ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ತಮ್ಮ ಹಳೆಯ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಅನರ್ಹಗೊಂಡಿರುವ ಶಾಸಕರು ಇಂದು ಸಭೆ ನಡೆಸಿದ್ದರು. ಸಭೆಯ ಬಳಿಕ ಮಾತನಾಡಿದ ಎಂಟಿಬಿ ನಾಗರಾಜ್, ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ನಡೆಸಲಾಯ್ತು. ಅನರ್ಹತೆ ಪ್ರಕರಣ ನ್ಯಾಯಾಲಯದಲ್ಲಿದ್ದು, ಅದರ ಬಗ್ಗೆ ಮಾತನಾಡಿದ್ದೇವೆ. ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಹೈಕಮಾಂಡ್ ಮೊದಲು ರಮೇಶ್ ಕುಮಾರ್ ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಬೇಕು ಎಂದು ಆಗ್ರಹಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮುನಿಯಪ್ಪನವರು ತಮ್ಮ ಸೋಲಿಗೆ ರಮೇಶ್ ಕುಮಾರ್ ಎಂದು ಹೈಕಮಾಂಡ್‍ಗೆ ವರದಿ ನೀಡಿದ್ದಾರೆ. ಹಾಗಾಗಿ ಮೊದಲು ಕಾಂಗ್ರೆಸ್ ರಮೇಶ್ ಕುಮಾರ್ ಅವರನ್ನು ಉಚ್ಛಾಟನೆಗೊಳಿಸಬೇಕಿದೆ. ರಮೇಶ್ ಕುಮಾರ್ ಪಾರ್ಟಿಗೆ ಮೋಸ ಮಾಡಿದ್ದಾರೆ. ಮುನಿಯಪ್ಪವರನ್ನು ಸೋಲಿಸಿದವರನ್ನು ಪಕ್ಷದಲ್ಲಿ ಯಾಕೆ ಇಟ್ಟುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರನ್ನು ಎಂಟಿಬಿ ಪ್ರಶ್ನೆ ಮಾಡಿದರು.

ಮೊದಲು ಎದೆ ಬಗೆದರೆ ಸಿದ್ದರಾಮಯ್ಯ ಇದ್ದಾರೆ ಎಂದು ಹೇಳಿದ್ದು ನಿಜ. ಇದೀಗ ಅವರನ್ನು ಆ ಸ್ಥಳದಿಂದ ಎತ್ತಿ ಪಕ್ಕದಲ್ಲಿ ಇಟ್ಟಿದ್ದೇನೆ. ಹೃದಯದಲ್ಲಿ ಮತ ನೀಡುವ ಮತದಾರರಿದ್ದಾರೆ. ಸಿದ್ದರಾಮಯ್ಯ ಜಾಗಕ್ಕೆ ಯಾರು ಬಂದಿಲ್ಲ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *