ಮತಾಂತರ ನಿಷೇಧ ಮಸೂದೆ ದುರುದ್ದೇಶಪೂರ್ವಕ: ಸಿದ್ದರಾಮಯ್ಯ ಟೀಕೆ

Public TV
1 Min Read

ಕೋಲಾರ: ಮತಾಂತರ ನಿಷೇಧ ಮಸೂದೆ ಹೆಸರಿನಲ್ಲಿ ಒಂದು ಧರ್ಮವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೋಲಾರ ಹೊರವಲಯದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಜಾಲಪ್ಪ ಅವರ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಲವಂತವಾಗಿ ಮತಾಂತರ ಮಾಡುವುದಕ್ಕೆ ನಮ್ಮ ವಿರೋಧವೂ ಇದೆ. ಆದರೆ ಒಂದು ಧರ್ಮವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ರಾಜಕೀಯ ಮಾಡಲು ಹೊರಟಿದೆ. ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸಲು ಹೊರಟಿದೆ. ಈ ರೀತಿ ರಾಜಕೀಯ ಮಾಡುವುದು ಸರಿಯಲ್ಲ. ಇದು ದುರುದ್ದೇಶಪೂರ್ವಕ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿವಾಹ ನೋಂದಣಿಯಂತೆ ಮತಾಂತರ ನೋಂದಣಿ ಮಾಡೋ ಚಿಂತನೆ ನಡೆದಿದೆ: ಮಾಧುಸ್ವಾಮಿ

ಬೆಳೆಹಾನಿ, ಕೊರೊನಾ ಪರಿಹಾರ, ಬಿಟ್ ಕಾಯಿನ್ ಹಗರಣ, ಪರ್ಸೆಂಟೇಜ್, ಮತಾಂತರ ನಿಷೇಧ ಕಾಯ್ದೆ ಸೇರಿದಂತೆ ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ಕೊಡುವ ವಿಚಾರವಾಗಿ ಮಠಾಧೀಶರ ಬಗ್ಗೆ ನಾನು ಮಾತನಾಡುವುದಿಲ್ಲ. ಆಹಾರ ಪದ್ಧತಿ ಅವರವರಿಗೆ ಬಿಟ್ಟಿರೋ ವಿಚಾರ. ಮೊಟ್ಟೆ ಯಾರು ತಿನ್ನುತಾರೋ ಅವರಿಗೆ ಕೊಡಿ, ಇಲ್ಲ ಅಂದರೆ ಕೊಡ್ಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದುತ್ವವಾದಿಗಳು ಅಧಿಕಾರಕ್ಕಾಗಿ ಯಾರನ್ನು ಬೇಕಾದ್ರೂ ಕೊಲ್ತಾರೆ: ರಾಹುಲ್ ಗಾಂಧಿ

ವಿಧಾನ ಪರಿಷತ್ ಚುನಾವಣೆಯಲ್ಲಿ 15 ಸ್ಥಾನದಲ್ಲಿ ಗೆಲ್ಲುತ್ತೇವೆ. ಕೋಲಾರದಲ್ಲಿ ಅನಿಲ್ ಕುಮಾರ್ ಗೆಲ್ಲುತ್ತಾರೆ. ಜೆಡಿಎಸ್ 6 ಕಡೆ ಮಾತ್ರ ಅಭ್ಯರ್ಥಿಗಳನ್ನು ಹಾಕಿದ್ದು, ಇನ್ನು 19 ಕಡೆ ಏಕೆ ಹಾಕಿಲ್ಲ? ಉಳಿದ ಕಡೆ ಬಿಜೆಪಿಗೆ ಜೆಡಿಎಸ್ ಕಡೆಯವರು ವೋಟು ಹಾಕಿಸಿರುತ್ತಾರೆ. ಬಿಜೆಪಿಗೆ ಜೆಡಿಎಸ್ ಯಾವಾಗಲೂ ‘ಬಿ’ ಟೀಂ. ನಾವು ಯಾವತ್ತೂ ಜೆಡಿಎಸ್ ಮನೆ ಬಾಗಿಲಿಗೆ ಹೋಗಿ ನಮ್ಮ ಜೊತೆ ಅಧಿಕಾರ ಮಾಡಿ ಎಂದು ಕೇಳಿಲ್ಲ. ಆಗ ಮಾತುಕತೆ ಆಗಿದ್ದು ನಿಜ, ಆದ್ರೆ ನಾನಂತೂ ಅವರ ಮನೆಗೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *