ಸಿದ್ದರಾಮಯ್ಯ ಟೆನ್ಷನ್ ಫ್ರೀ – ಮೂರು ದಿನ ರೆಸಾರ್ಟ್‌ನಲ್ಲಿ ವಿಶ್ರಾಂತಿ

Public TV
1 Min Read

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರಮಾಪ್ತ ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆಯುವ ಹಂತದಲ್ಲಿದ್ದಾರೆ. ಇಂತಹ ಸಂದರ್ಭದಲ್ಲೂ ಕರ್ನಾಟಕ ಕಾಂಗ್ರೆಸ್ ಮುಖಂಡ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲು ಮೈಸೂರಿಗೆ ತೆರಳಿದ್ದಾರೆ.

೩ ದಿನಗಳ ವಿಶ್ರಾಂತಿ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ಭಾನುವಾರ ಸಂಜೆ ಕಾರಾಪುರ ಲಾಡ್ಜ್ ರೆಸಾರ್ಟ್‌ಗೆ ತೆರಳಿದ್ದಾರೆ. ಅಲ್ಲಿಂದ ಅವರು ಸ್ವಲ್ಪ ಸಮಯಗಳ ಕಾಲ ವಿಶ್ರಾಂತಿ ಪಡೆದು ಕಬಿನಿ ಜಲಾಶಯ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೋಟ್ ಮೂಲಕ ಕಬಿನಿ ಹಿನ್ನೀರಿನಲ್ಲಿರುವ ಆರೆಂಜ್ ಕೌಂಟಿ ರೆಸಾರ್ಟ್‌ಗೆ ತೆರಳಿದ್ದಾರೆ. ಇದನ್ನೂ ಓದಿ: ಇಂದು ಜನ ಕೆಟ್ಟಿಲ್ಲ, ಲೀಡರ್‌ಗಳು ಕೆಟ್ಟಿದ್ದಾರೆ: ಬಸವರಾಜ ರಾಯರೆಡ್ಡಿ ಕಿಡಿ

siddaramaiah

೩ ದಿನಗಳ ವಿಶ್ರಾಂತಿಯ ಸಮಯದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಭಾಗಿಯಾಗಿ ನಂತರ ಸಿದ್ದರಾಮಯ್ಯ ಫೆಬ್ರವರಿ ೨ ರಂದು ಬೆಂಗಳೂರಿಗೆ ಮರಳಲಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಖರೀದಿಸಿಲ್ಲ – 3 ಕೋಟಿ ಮಾನನಷ್ಟ ಕೇಸ್‌ ಹಾಕ್ತೀನಿ ಎಂದ ಚನ್ನಣ್ಣನವರ್‌

Share This Article
Leave a Comment

Leave a Reply

Your email address will not be published. Required fields are marked *