ಹೆಚ್‍ಡಿ ರೇವಣ್ಣಗೆ ಪರೋಕ್ಷವಾಗಿ ಮಾಜಿ ಸಿಎಂ ಟಾಂಗ್

Public TV
1 Min Read

ಬೆಂಗಳೂರು: ವಿಧಾನಸಭೆಯಲ್ಲಿ ಮೊದಲ ಬಾರಿಗೆ ಚರ್ಚೆಯಲ್ಲಿ ಪಾಲ್ಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿ ಪಕ್ಷದ ನಾಯಕ ಸಚಿವ ಹೆಚ್‍ಡಿ ರೇವಣ್ಣಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಯಡಿಯೂರಪ್ಪ ಇರುವಾಗ ಹಾಲಿಗೆ ಎರಡು ರೂ. ಪ್ರೋತ್ಸಾಹ ಧನ ಇತ್ತು. ನಾನು ಅದನ್ನು 4-5 ರೂ. ಮಾಡಿದೆ. ಆದಾದ್ಮೇಲೆ 50,000 ಹಾಲು ಒಂದು ದಿನಕ್ಕೆ ಬರುತ್ತಿದ್ದದ್ದು, 75 ಲಕ್ಷ ಹಾಲು ಒಂದು ದಿನಕ್ಕೆ ಹೆಚ್ಚಾಗಿತ್ತು. ಆಗಂತ ನಾನು ಕೆಎಂಎಫ್‍ನಲ್ಲಿ ಎಲ್ಲವೂ ಸರಿಯಿದೆ ಎಂದು ಹೇಳಲ್ಲ. ಅನಗತ್ಯ ನೇಮಕಾಗಿ ಮಾಡಿಕೊಂಡಿದ್ದಾರೆ. ಅಗತ್ಯಕ್ಕಿಂತ ಹೆಚ್ಚು ಸಂಬಳ ಕೊಡುತ್ತಿದ್ದಾರೆ. ಆದರೆ ನಮ್ಮ ಸರ್ಕಾರ ಕೊಟ್ಟಿದ್ದ ಪ್ರೋತ್ಸಾಹ ಧನ ದುರುಪಯೋಗ ಆಗಿಲ್ಲ ಅಂತ ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಮಾತನಾಡಿದ ಬಳಿಕ ಕೆಲವು ಹಾಲು ಉತ್ಪಾದಕರ ಸಂಘಗಳಲ್ಲಿ ಸದಸ್ಯರೇ ರೈತರ ಹೆಸರಲ್ಲಿ ನಕಲಿ ಖಾತೆಗಳನ್ನು ತೆರೆದು ಪ್ರೋತ್ಸಾಹ ಧನ ಕಬಳಿಸುತ್ತಿರುವುದು ನಿಜ. ಇದನ್ನು ತಪ್ಪಿಸಿ ನೈಜ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಾಡಬೇಕು ಅಂತ ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಉತ್ತರ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *