ಸಿದ್ದರಾಮಯ್ಯ ಸಿಎಂ ಹಾಗೇ ನಿರ್ಧಾರ ಕೈಗೊಳ್ತಾರೆ: ಬಸವರಾಜ್ ಹೊರಟ್ಟಿ

Public TV
1 Min Read

-ದೋಸ್ತಿ ಸರ್ಕಾರ ಬಹಳ ದಿನ ನಡೆಯೋದು ಡೌಟು

ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರು ಸ್ವತಃ ತಾವೇ ಮುಖ್ಯಮಂತ್ರಿ ಹಾಗೇ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಹೀಗಾದರೆ ಮೈತ್ರಿ ಸರ್ಕಾರ ಬಹಳ ದಿನ ನಡೆಯುವುದು ಡೌಟು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಮಾಡಬೇಕಾದಾಗ ಕಾಂಗ್ರೆಸ್ ಯಾವುದೇ ಕಂಡೀಷನ್ ಹಾಕಿರಲಿಲ್ಲ. ಆದರೆ ಈಗ ಕಾಂಗ್ರೆಸ್ಸಿನವರು ಅಧಿಕಾರಕ್ಕಾಗಿ ಏನೆಲ್ಲಾ ಮಾಡುತ್ತಿದ್ದಾರೆ. ಬಹುಶಃ ಸಿದ್ದರಾಮಯನವರಿಗೆ ಈ ಸರ್ಕಾರವನ್ನು ನಡೆಸುವ ಇಚ್ಛೆ ಇಲ್ಲ. ಹೀಗಾಗಿ ಅವರು ಈ ರೀತಿ ನಡೆದುಕೊಳ್ಳುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿ ರೀತಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಈಗಾಗಲೇ ಜೆಡಿಸ್ ವರಿಷ್ಠರಾದ ಎಚ್.ಡಿ.ದೇವೇಗೌಡರೂ ಸಹ ಕಾಂಗ್ರೆಸ್ ನಡೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದು ಹೀಗೆ ಮುಂದುವರಿದರೆ, ಸರ್ಕಾರ ನಡೆಸುವುದು ಕಷ್ಟಸಾಧ್ಯ ಎಂದು ಕಿಡಿಕಾರಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *