ಯೂಟರ್ನ್ ಹೊಡೆದ ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ವಿಪಕ್ಷ ನಾಯಕನ ಸ್ಥಾನ ಹಾಗೂ ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಕೊಟ್ಟ ರಾಜೀನಾಮೆ ವಾಪಸ್ ಪಡೆಯಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಇದುವರೆಗೆ ರಾಜೀನಾಮೆ ವಾಪಸ್ ಪಡೆಯಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯ ಅವರು ಈಗ ಯೂಟರ್ನ್ ಹೊಡೆದಿದ್ದಾರೆ.

ದೆಹಲಿಗೆ ತಲುಪಿದ ನಂತರ ಕೊನೆಯ ಅಭಿಪ್ರಾಯ ಕೇಳಲು ಸಿದ್ದರಾಮಯ್ಯ ಅವರಿಗೆ ಮಧುಸೂದನ್ ಮಿಸ್ತ್ರಿ ಕರೆ ಮಾಡಿದ್ದಾರೆ. 10 ದಿನದಲ್ಲಿ ಅಂತಿಮ ತೀರ್ಮಾನ ಹೇಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ವೇಳೆ 10 ದಿನ ಅಲ್ಲ 1 ಗಂಟೆಯಲ್ಲಿ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಮಧುಸೂದನ್ ಮಿಸ್ತ್ರಿ ಹೇಳಿದಾಗ, ನಾನು ದೆಹಲಿಗೆ ಬಂದು ಹೈಕಮಾಂಡ್ ಭೇಟಿ ಮಾಡುತ್ತೇನೆ. ಹೈಕಮಾಂಡ್ ಸೂಚನೆ ಕೊಟ್ಟರೆ ವಿಪಕ್ಷ ಹಾಗೂ ಸಿಎಲ್‍ಪಿಯಲ್ಲಿ ಮುಂದುವರಿಯುತ್ತೇನೆ ಎಂದು ಸಿದ್ದರಾಮಯ್ಯ ಉತ್ತರಿಸಿದ್ದಾರೆ.

ಈ ಮೂಲಕ ವಿಪಕ್ಷ ಹಾಗೂ ಸಿಎಲ್‌ಪಿ ನಾಯಕನ ಸ್ಥಾನದಲ್ಲಿ ಮುಂದುವರಿಯುವ ಇಚ್ಚೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಕಡೆ ಗಳಿಗೆಯಲ್ಲಿ ಯೂಟರ್ನ್ ಹೊಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *