ಸಿದ್ದರಾಮಯ್ಯ ಹೆಸರು ದೇವರ ಹೆಸರಿನಿಂದ ಬಂದಿದೆ, ಟೀಕಿಸಿದ್ರೆ ಹುಷಾರ್: ಎಂ.ಬಿ ಪಾಟೀಲ್

Public TV
2 Min Read

ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) `ಕಾಂಗ್ರೆಸ್‌ನ ಸಿದ್ರಾಮುಲ್ಲಾ ಖಾನ್ (ಸಿದ್ದರಾಮಯ್ಯ) ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತವೆ’ ಎನ್ನುವ ಹೇಳಿಕೆಗೆ ಕಾಂಗ್ರೆಸ್‌ನಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಶಾಸಕ ಎಂ.ಬಿ ಪಾಟೀಲ್ (MB Patil), ಸಿದ್ರಾಮುಲ್ಲಾ ಖಾನ್ ಹೇಳಿಕೆ ಸರಿಯಲ್ಲ. ನಾವೂ ಪ್ರತಿಭಟನೆ ಪ್ರಾರಂಭಿಸಿದ್ರೆ, ಸಿ.ಟಿ ರವಿ (CT Ravi) ಹೊರಗೆ ಬರಲು ಸಾಧ್ಯವಾಗೋದಿಲ್ಲ. ಸಿದ್ದರಾಮಯ್ಯ (Siddaramaiah) ವಿರುದ್ಧ ರಾಜಕೀಯವಾಗಿ ಮಾತನಾಡಿ, ಆದ್ರೆ ಈ ತರಹದ ಮಾತುಗಳು ಬೇಡ. ಸಿದ್ದರಾಮೇಶ್ವರ ಎಂಬ ದೇವರ ಹೆಸರಿನಿಂದ ಸಿದ್ದರಾಮಯ್ಯ ಹೆಸರು ಬಂದಿದೆ. ಇದನ್ನು ಇಲ್ಲಿಗೇ ನಿಲ್ಲಿಸಿದ್ರೆ ಸರಿ. ಇಲ್ಲದಿದ್ದರೆ ಮತ್ತಷ್ಟು ವಿಕೋಪಕ್ಕೆ ಹೋಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

ಬಿಜೆಪಿಯವರಿಗೆ ಯಾವಾಗಲೂ ಅಭ್ಯಾಸ ಆಗಿಬಿಟ್ಟಿದೆ. ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್ ನಲ್ಲಿ ಇರಲಿಲ್ವಾ ಅಂತಾರೆ. ವಿರೋಧ ಪಕ್ಷದಲ್ಲಿ ಇದ್ದವರು ಅವರು, ಆಗ ಯಾಕೆ ಸುಮ್ಮನೆ ಇದ್ದರು? ರೌಡಿಗಳ ವಿಷಯ ಬಂದಾಗ ರೌಡಿಗಳನ್ನು ಸೇರಿಸಿಕೊಂಡಿದ್ದಾರೆ, ರೌಡಿಗಳಿಗೆ (Rowdy Sheeter) ಟಿಕೇಟ್ ಕೊಡುವ ವಿಚಾರದಲ್ಲಿ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಅನ್ನೋ ಮಾಹಿತಿ ಇದೆ. ಮಾಡೋದೆಲ್ಲ ಮಾಡಿ ಕಾಂಗ್ರೆಸ್ ಮೇಲೆ ಆರೋಪ ಮಾಡೋದು ಅವರಿಗೆ ಹ್ಯಾಬಿಟ್ ಆಗಿಬಿಟ್ಟಿದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ರಾಮುಲು ಗೈರು- ಮುರಿದು ಬಿತ್ತಾ ದಶಕಗಳ ಗೆಳೆತನದ ನಂಟು..?

ಡಿಕೆಶಿ, ನಲಪಾಡ್ ಮೇಲೆ ತನಿಖೆ ಆಗುತ್ತೆ:
ಡಿ.ಕೆ.ಶಿವಕುಮಾರ್ (DK Shivakumar) ಮೇಲೆ ಆರೋಪಗಳಿದ್ದರೆ ತನಿಖೆ ನಡೆಯುತ್ತೆ, ಹಾಗೆಯೇ ನಲಪಾಡ್ ಮೇಲೆ ರೌಡಿಶೀಟ್ ಇದ್ದರೆ, ತನಿಖೆ ಆಗುತ್ತದೆ. ಅದ್ರೆ ಕೆಪಿಸಿಸಿ (KPCC) ಅಧ್ಯಕ್ಷರನ್ನ ಕೊತ್ವಾಲ್ ಶಿಷ್ಯ ಅನ್ನೋದು ಸರಿಯಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ ಗಡಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಎಂ ಸರ್ವ ಪಕ್ಷ ಸಭೆ ಕರೆಯಬೇಕಿತ್ತು ಕರೆದಿಲ್ಲ. ಮಹಾರಾಷ್ಟ್ರ ರಾಜಕೀಯ ಪರಿಸ್ಥಿತಿ ಸರಿಯಿಲ್ಲ. ಹೀಗಾಗಿ ಅದನ್ನು ಡೈವರ್ಟ್ ಮಾಡಲು ಗಡಿ ಕ್ಯಾತೆ ತೆಗೆದಿದ್ದಾರೆ. ಜತ್, ಅಕ್ಕಲಕೋಟೆ, ಸೊಲ್ಲಾಪುರದಲ್ಲಿ ಎಲ್ಲ ಕನ್ನಡಿಗರಿದ್ದಾರೆ. ಹಾಗಾದ್ರೆ ಇವೆಲ್ಲವೂ ಕರ್ನಾಟಕಕ್ಕೆ ಸೇರಬೇಕಾಗುತ್ತದೆ ಎಂದು ಒತ್ತಾಯಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *