ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದ್ರೆ, ಅದು ನಂಗೆ ಅಂದ್ರೆ ಜವಾಬ್ದಾರ ನಾನಲ್ಲ: ಸಿದ್ದಾರ್ಥ್

Public TV
1 Min Read

ಚೆನ್ನೈ: ಟಾಲಿವುಡ್ ನಟ ನಾಗಚೈತನ್ಯ ಹಾಗೂ ಸಮಂತಾ ವಿಚ್ಛೇದನ ಬಳಿಕ ಕಾಲಿವುಡ್ ನಟ ಸಿದ್ಧಾರ್ಥ್ ಮಾಡಿದ್ದ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು. ಸದ್ಯ ಈ ಟ್ವೀಟ್ ಮಾಡಿದ್ದು ಯಾರಿಗೆ ಎಂಬುವುದರ ಬಗ್ಗೆ ಸಿದ್ದಾರ್ಥ್ ಸ್ಪಷ್ಟನೆ ನೀಡಿದ್ದಾರೆ.

ಸಿದ್ದಾರ್ಥ್ ಹಾಗೂ ಸಮಂತಾ ಒಂದು ಕಾಲದಲ್ಲಿ ರಿಲೇಶನ್ ಶಿಪ್‍ನಲ್ಲಿದ್ದರು. ಆದರೆ ಕಾರಣಾಂತರಗಳಿಂದ ಇಬ್ಬರು ದೂರ ಆದರು. ಬಳಿಕ ಸಮಂತಾ, ನಾಗಚೈತನ್ಯರನ್ನು ಪ್ರೀತಿಸಿ ವಿವಾಹವಾದರು. ಆದ್ಯಾಗೂ ಕೆಲವು ಮನಸ್ತಾಪಗಳಿಂದ 4 ವರ್ಷಗಳ ನಂತರ ಇಬ್ಬರು ಇತ್ತೀಚೆಗಷ್ಟೇ ವಿಚ್ಛೇದನ ಪಡೆದುಕೊಂಡರು. ಈ ವೇಳೆ ಸಿದ್ದಾರ್ಥ್ ಮೋಸ ಮಾಡುವವರು ಎಂದಿಗೂ ಏಳಿಗೆಯಾಗುವುದಿಲ್ಲ, ಎನ್ನುವ ಪಾಠವನ್ನು ಬಾಲ್ಯದಲ್ಲಿ ನನ್ನ ಶಿಕ್ಷಕರಿಂದ ಕಲಿತೆ ಎಂದು ನಟ ಸಿದ್ದಾರ್ಥ್ ಟ್ವೀಟ್ ಮಾಡಿದ್ದರು.

ಈ ಹಿನ್ನೆಲೆ ಸಿದ್ದಾರ್ಥ್ ಟ್ವೀಟ್‍ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿ ಕೆಂಡಕಾರಿದ್ದಾರೆ. ಹೀಗೆ ಹೀನಾಯಾವಾಗಿ ಮಾತನಾಡಲು ಮನಸ್ಸಾದರೂ ಹೇಗೆ ಬರುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೋಸ ಮಾಡುವವರು ಎಂದಿಗೂ ಉದ್ಧಾರ ಆಗಲ್ಲ: ಸಿದ್ದಾರ್ಥ್

ಹೀಗಾಗಿ ಈ ಕುರಿತಂತೆ ಸಿದ್ದಾರ್ಥ್ ತಮ್ಮ ಹಿಂದಿನ ಟ್ವೀಟ್ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. ನಿತ್ಯ ನನ್ನ ಮನಸ್ಸಿಗೆ ಏನು ಬರುತ್ತದೆ ಅದನ್ನು ಟ್ವೀಟ್ ಮಾಡುತ್ತೇನೆ. ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದಾಗ ಅದು ನನಗೆ ಅಂದು ಕೊಂಡರೆ ನಾನು ಜವಾಬ್ದಾರನಲ್ಲ ಎಂದಿದ್ದಾರೆ. ಹೀಗೆ ಟ್ರೋಲ್ ಮಾಡುವವರಿಗೆ ಕಾರವಾಗಿ ಉತ್ತರಿಸಿದ್ದಾರೆ. ಇದನ್ನೂ ಓದಿ: ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು: ಸಮಂತಾ

 

Share This Article
Leave a Comment

Leave a Reply

Your email address will not be published. Required fields are marked *