ಗುರುದ್ವಾರದ ಮಾಜಿ ಗ್ರಂಥಿ ಮೇಲೆ ಹಲ್ಲೆಗೈದು, ಕೂದಲು ಕಟ್ ಮಾಡಿದ ಕಿಡಿಗೇಡಿಗಳು

Public TV
1 Min Read

ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಗುರುದ್ವಾರದ ಮಾಜಿ ಗ್ರಂಥಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಥಳಿಸಿ ಅವರ ಕೂದಲನ್ನು ಕತ್ತರಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು.

‘ಗ್ರಂಥಿ’ ಎಂದರೆ ಗುರುದ್ವಾರವೊಂದರಲ್ಲಿ ಸಿಖ್ಖರ ಪವಿತ್ರ ಗ್ರಂಥ ‘ಶ್ರೀ ಗುರು ಗ್ರಂಥ ಸಾಹಿಬ್’ನ ವಿಧ್ಯುಕ್ತ ಓದುವವರು. ಗುರುವಾರ ರಾತ್ರಿ ಗುರುಬಕ್ಷ್ ಸಿಂಗ್ ಮೋಟಾರ್ ಸೈಕಲ್‍ನಲ್ಲಿ ಅಲವಾಡ ಗ್ರಾಮಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ಕೊಟ್ಟರು. ಇದನ್ನೂ ಓದಿ: ಬ್ಲ್ಯಾಕ್ ಏಲಿಯನ್‍ನಂತೆ ಬದಲಾದ ಇವನನ್ನು ನೋಡಿದವರು ಕೆಲಸವನ್ನೆ ಕೊಡುತ್ತಿಲ್ಲ – ಓದಿ ವಿಚಿತ್ರ ಕಥೆ 

ನಡೆದಿದ್ದೇನು?
ಸಹಾಯ ಕೇಳುವ ನೆಪದಲ್ಲಿ ಆರೋಪಿಗಳು ಗುರುಬಕ್ಷ್ ಸಿಂಗ್ ಅವರನ್ನು ತಡೆದಿದ್ದಾರೆ. ಈ ವೇಳೆ ಅವರ ಕಣ್ಣಿಗೆ ಮೆಣಸಿನ ಪುಡಿ ಎರಚಿದ್ದಾರೆ. ನಂತರ ಆರೋಪಿಗಳು ಗುರುಬಕ್ಷ್ ಸಿಂಗ್ ಅವರನ್ನು ಥಳಿಸಿ ಕೂದಲು ಕತ್ತರಿಸಿದ್ದಾರೆ.

ಅಲ್ವಾರ್‌ನ ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವನಿ ಗೌತಮ್ ಅವರು ಈ ಕುರಿತು ಮಾತನಾಡಿದ್ದು, ಅಲವಾಡ ಗ್ರಾಮದಲ್ಲಿ ಸಿಖ್ಖರು ಮತ್ತು ಮಿಯೋ ಮುಸ್ಲಿಮರ ನಡುವಿನ ಹಳೆ ದ್ವೇಷದ ಕಾರಣದಿಂದ ಈ ಕೃತ್ಯ ನಡೆದಿದೆ. ಪ್ರೇಮ ಸಂಬಂಧಗಳ ಆರೋಪದ ಮೇಲೆ ಸಿಂಗ್ ಅವರನ್ನು ಗುರಿಯಾಗಿಸಲಾಗಿದೆ ಎಂದು ತೋರುತ್ತದೆ ಎಂದು ಅನುಮಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಯಡಿಯೂರಪ್ಪಗೆ ಬಹಳ ವಯಸ್ಸೇನು ಆಗಿಲ್ಲ – ದೈಹಿಕ, ಮಾನಸಿಕವಾಗಿ ಸದೃಢರಾಗಿದ್ದಾರೆ: ಸುಧಾಕರ್ 

ಈ ಕುರಿತು ರಾಮಗಢ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *