`ಅಪರಿಚಿತೆ’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾದ ಸಿಂಧೂ ಲೋಕನಾಥ್

Public TV
1 Min Read

`ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ (Geethapriya) ಸುರೇಶ್ ಕುಮಾರ್ ಇದೀಗ `ಅಪರಿಚಿತೆ’ (Aparichithe) ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿಶ್ವನಾಥ್ ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಶಾಸಕ ಅಶ್ವಥ್ ನಾರಾಯಣ್ ಅನಾವರಣ ಮಾಡಿ ಚಿತ್ರಕ್ಕೆ ಚಾಲನೆ ನೀಡಿದ್ದರು.

ಪ್ರಸ್ತುತ ಚಿತ್ರಕ್ಕೆ ರಾಮನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಗೀತಪ್ರಿಯ, ಸಿಂಧೂ ಲೋಕನಾಥ್ (Sindhu Loknath) ಸೇರಿದಂತೆ ಅನೇಕ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ

ನೈಜ ಘಟನೆ ಆಧಾರಿತ ಈ ಚಿತ್ರದಲ್ಲಿ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ. ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾಹಂದರ ಸಹ ಹೊಂದಿದೆ ಎಂದು ನಟಿ ಗೀತಪ್ರಿಯ ತಿಳಿಸಿದ್ದಾರೆ. ಇದನ್ನೂ ಓದಿ: `ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?

ಗೀತಪ್ರಿಯ ಅವರ ಪತಿ ಸುರೇಶ್ ಕುಮಾರ್ ಅವರು ಅಮರ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಗೀತಪ್ರಿಯ, ಹಿರಿಯ ನಟ ಶ್ರೀನಾಥ್, ರೋಹಿತ್ (ಶ್ರೀನಾಥ್ ಅವರ ಪುತ್ರ), ಸಿಂಧೂ ಲೋಕನಾಥ್, ಆರ್.ಜೆ ನಿಖಿತಾ ಮುಂತಾದವರಿದ್ದಾರೆ.

Share This Article