ನಾನೊಬ್ಬ ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗ್ತಿದೆ: ಉಗ್ರರ ದಾಳಿಗೆ ಸಲೀಂ ಮರ್ಚೆಂಟ್ ಕಿಡಿ

Public TV
1 Min Read

ಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದ ದಾಳಿ ಕುರಿತಂತೆ ಬಾಲಿವುಡ್ ಖ್ಯಾತ ಗಾಯಕ ಸಲೀಂ ಮರ್ಚೆಂಟ್ (Salim Merchant) ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಹಿಂದೂ ಎಂಬ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ನಾನೊಬ್ಬ ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗ್ತಿದೆ ಎಂದು ಸಲೀಂ ಮಾತನಾಡಿದ್ದಾರೆ. ಇದನ್ನೂ ಓದಿ: ಮಹಾಭಾರತ ಸಿನಿಮಾ ಮಾಡೋದಾಗಿ ಘೋಷಿಸಿದ ಆಮೀರ್ ಖಾನ್

ಗಾಯಕ ಸಲೀಂ ಹಂಚಿಕೊಂಡಿರುವ ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ, ಹಿಂದೂ ಅನ್ನೋ ಕಾರಣಕ್ಕೆ ಈ ದಾಳಿಯಲ್ಲಿ ಅಮಾಯಕರ ಹತ್ಯೆಯಾಗಿದೆ. ಅಮಾಯಕರನ್ನೇ ಟಾರ್ಗೆಟ್ ಮಾಡಲಾಗಿದೆ. ಹತ್ಯೆ ಮಾಡಿದವರು ಮುಸ್ಲಿಂರೇ? ಖಂಡಿತಾ ಅಲ್ಲ. ಅವರು ಭಯೋತ್ಪಾದಕರು ಎಂದಿದ್ದಾರೆ. ಹತ್ಯೆಯನ್ನು ಇಸ್ಲಾಂ ಎಂದು ಒಪ್ಪುವುದಿಲ್ಲ. ಯಾವುದೇ ಧರ್ಮದಲ್ಲಿ ಹೀಗೆಲ್ಲಾ ಇಲ್ಲ. ನಾನೊಬ್ಬ ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗುತ್ತಿದೆ. ಇಂತಹ ದಿನಗಳನ್ನು ನೋಡುವಂತೆ ಆಗಿದೆ. ಇದನ್ನೂ ಓದಿ:ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

 

View this post on Instagram

 

A post shared by Salim Merchant (@salimmerchant)

ನನ್ನ ಹಿಂದೂ ಸಹೋದರ ಸಹೋದರಿಯರ ಮೇಲೆ ಅವರು ಕ್ರೂರವಾಗಿ ದಾಳಿ ಮಾಡಿದ್ದಾರೆ. ಅದು ಹಿಂದೂ ಆಗಿರೋದ್ದಕ್ಕೆ, ಇದು ಯಾವಾಗ ಅಂತ್ಯಗೊಳ್ಳುತ್ತೆ ಎಂದು ಅವರು ಪ್ರಶ್ನಿಸಿದ್ದಾರೆ. ಕಳೆದ ಎರಡ್ಮೂರು ವರ್ಷದಿಂದ ಕಾಶ್ಮೀರ ಜನರು ಸಮಸ್ಯೆಗಳಿಂದ ಮುಕ್ತಿ ಪಡೆದು, ಸಹಜ ಜೀವನಕ್ಕೆ ಮರಳುತ್ತಿದ್ದರು. ಈ ದಾಳಿಯಿಂದ ಮತ್ತೆ ಅದೇ ರೀತಿ ಪರಿಸ್ಥಿತಿ ಎದುರಿಸುವಂತಾಗಿದೆ. ನನಗೆ ಯಾವ ರೀತಿಯಲ್ಲಿ ನೋವು ಮತ್ತು ಆಕ್ರೋಶವನ್ನು ವ್ಯಕ್ತಪಡಿಸಬೇಕು ಅಂತ ಅರ್ಥವಾಗುತ್ತಿಲ್ಲ. ನಾನು ಆ ದೇವರಲ್ಲಿ ಕೇಳಿಕೊಳ್ಳುತ್ತೇನೆ, ತೀರಿಕೊಂಡಿರುವ ಆ ವ್ಯಕ್ತಿಗಳ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗಾಯಕ ಸಲೀಂ ಮಾತನಾಡಿದ್ದಾರೆ.

ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಗೆ 26 ಮಂದಿ ಹಿಂದೂಗಳು ಬಲಿಯಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

Share This Article