ಪುಣೆ-ಬೆಂಗಳೂರು ಹೆದ್ದಾರಿ; ನಿಯಂತ್ರಣ ತಪ್ಪಿ ವಾಹನಗಳಿಗೆ ಕಂಟೇನರ್‌ ಟ್ರಕ್‌ ಡಿಕ್ಕಿ – 6 ಮಂದಿ ಸಾವು

0 Min Read

ಮುಂಬೈ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆ ಬಳಿ ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ.

- Advertisement -

ಟ್ರಕ್‌ ಡಿಕ್ಕಿ ಹೊಡೆದ ಬೆನ್ನಲ್ಲೇ 2-3 ಭಾರೀ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಲಯ 3 ಪುಣೆ ನಗರ ಪೊಲೀಸ್ ಡಿಸಿಪಿ ಸಂಭಾಜಿ ಕದಮ್ ತಿಳಿಸಿದ್ದಾರೆ.

- Advertisement -

- Advertisement -

ಅಪಘಾತದಲ್ಲಿ ಎಂಟರಿಂದ 10 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹೇಗೆ ಸಂಭವಿಸಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಅಗ್ನಿಶಾಮಕ ದಳವು ನೀರಿನ ಟ್ಯಾಂಕರ್‌ಗಳ ಮೂಲಕ ಬೆಂಕಿಯನ್ನು ನಂದಿಸುವ ಕಾರ್ಯ ನಡೆಸಿವೆ. ಅಪಘಾತದಿಂದಾಗಿ ಜನನಿಬಿಡ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

Share This Article