ಎಸ್.ಎಂ.ಕೃಷ್ಣ ಬಿಜೆಪಿ ಸೇರುವುದು ಖಚಿತ: ಬಿಎಸ್‍ವೈ

Public TV
1 Min Read

ಕಲಬುರಗಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಖಚಿತವಾಗಿದ್ದು, ಈಗಾಗಲೇ ಎಲ್ಲಾ ಹಂತದ ಮಾತುಕತೆ ಮುಗಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಲಬುರಗಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಎಸ್.ಎಂ.ಕೃಷ್ಣ ರವರು ಯಾವುದೇ ಡಿಮ್ಯಾಂಡ್ ಇಟ್ಟು ಬಿಜೆಪಿಗೆ ಸೇರುತ್ತಿಲ್ಲ. ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವಿದೆ. ಹೀಗಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ. ಶ್ರೀನಿವಾಸ್ ಪ್ರಸಾದ್ ಹಾಗೂ ಕೃಷ್ಣ ಸೇರ್ಪಡೆಯಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಿದೆ ಎಂದು ಬಿಎಸ್‍ವೈ ಹೇಳಿದರು.

ಮಂಡ್ಯ, ಚಾಮರಾಜನಗರ ಹಾಗೂ ಮೈಸೂರು ಭಾಗದಲ್ಲಿ ಅನೇಕರು ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದು, ಅವರೆಲ್ಲಾ ಬಿಜೆಪಿ ಸೇರಲು ಸಾಲಾಗಿ ನಿಂತಿದ್ದಾರೆ. ಹಿಂದಿನ ಮತ್ತು ಈಗಿನ ಯಡಿಯೂರಪ್ಪ ಒಂದೇ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *