ವಿಶಾಖಪಟ್ಟಣಂ-ದೆಹಲಿ, ಆಂಧ್ರಪ್ರದೇಶ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ – ಪ್ರಯಾಣಿಕರಲ್ಲಿ ಆತಂಕ

Public TV
1 Min Read

ಹೈದರಾಬಾದ್: ವಿಶಾಖಪಟ್ಟಣಂ-ದೆಹಲಿ ಆಂಧ್ರಪ್ರದೇಶ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‍ನಲ್ಲಿ ಇಂದು ಬೆಳಗ್ಗೆ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಿಕರು ಭಯಭೀತರಾಗಿದ್ದರು.

ವಿಶಾಖಪಟ್ಟಣಂ-ದೆಹಲಿ ಆಂಧ್ರಪ್ರದೇಶ ಎಕ್ಸ್‌ಪ್ರೆಸ್‍ನ ಎಸ್6 ಕೋಚ್‍ನಡಿಯಲ್ಲಿ ಹೊಗೆ ಆವರಿಸಿತ್ತು. ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಲೋಕೋ ಚಾಲಕನು ವಾರಂಗಲ್‍ನ ನೆಕ್ಕೊಂಡಾ ರೈಲು ನಿಲ್ದಾಣದ ಬಳಿ ರೈಲನ್ನು ನಿಲ್ಲಿಸಿದರು. ಇದನ್ನೂ ಓದಿ: ಪ್ರಿಯತಮೆ ತಾಯಿಗಾಗಿ ಕಿಡ್ನಿ ಕೊಟ್ಟ- ಒಂದೇ ಕಿಡ್ನಿಯವ ಬೇಡವೆಂದು ಬೇರೆಯವ್ರ ಕೈ ಹಿಡಿದ್ಳು!

train

ಹೊಗೆ ನೋಡಿ ಎಚ್ಚೆತ್ತ ಲೋಕೋ ಚಾಲಕರು ರೈಲನ್ನು ನಿಲ್ಲಿಸಿ ನೋಡಿದಾಗ ಬ್ರೇಕ್‍ಗಳ ಜಾಮ್‍ನಿಂದಾಗಿ ಘಟನೆ ಸಂಭವಿಸಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದರಿಂದಾಗಿ ಸುಮಾರು ಒಂದು ಗಂಟೆ ಕಾಲ ರೈಲನ್ನು ನಿಲ್ಲಿಸಲಾಯಿತು ಎನ್ನಲಾಗಿದೆ. ಇದನ್ನೂ ಓದಿ:  ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ

Share This Article
Leave a Comment

Leave a Reply

Your email address will not be published. Required fields are marked *