ಬರೋಬ್ಬರಿ 50 ಕೆಜಿ ತೂಕದ ಹೆಬ್ಬಾವು ರಕ್ಷಣೆ – ಕಾಡಿಗೆ ಬಿಟ್ಟ ಸ್ನೇಕ್ ರಾಘವೇಂದ್ರ

Public TV
1 Min Read

ಕೊಪ್ಪಳ: ಜಿಲ್ಲೆಯ ಗಂಗಾವತಿಯ ದೇವಘಾಟ್ ಬಳಿ ರೈತನ ಹೊಲದಲ್ಲಿ ಕಾಣಿಸಿಕೊಂಡ ಬರೋಬ್ಬರಿ 50 ಕೆಜಿ ತೂಕದ ಹೆಬ್ಬಾವೊಂದನ್ನು ಸ್ನೇಕ್ ಪುಟ್ಟು ಅಲಿಯಾಸ್ ಸಿರಿಗೇರಿ ರಾಘವೇಂದ್ರ ರಕ್ಷಣೆ ಮಾಡಿ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

Snake

ಗಂಗಾವತಿಯ ಲಯನ್ಸ್ ಕ್ಲಬ್ ಅಧ್ಯಕ್ಷ ಡಿ.ಎಂ ಅಭಿಷೇಕ್ ಎಂಬವರ ಹೊಲದಲ್ಲಿ ಈ ಹಾವು ಕಾಣಿಸಿಕೊಂಡಿತ್ತು. ಸ್ಥಳೀಯರೊಬ್ಬರು ಹಾವಿನ ಚಿತ್ರ ಸೆರೆ ಹಿಡಿದು ಸಿರಿಗೇರಿ ರಾಘವೇಂದ್ರ ಅವರಿಗೆ ಕಳುಹಿಸಿದ್ದರು.  ಇದನ್ನೂ ಓದಿ: ನನ್ನ ಅಭಿಮಾನಿಗಳಿಂದಲೇ ನಾನು ಇಲ್ಲಿ ಇರೋದು: ಕಿಚ್ಚ

Snake

ಕೂಡಲೇ ಸ್ಥಳಕ್ಕೆ ತೆರಳಿದ ಸ್ನೇಕ್ ಪುಟ್ಟು, ರೋಚಕ ಕಾರ್ಯಾಚರಣೆ ನಡೆಸಿ ಭತ್ತದ ಗದ್ದೆಯಲ್ಲಿ ನುಸುಳಿಕೊಂಡು ಹೋಗುತ್ತಿದ್ದ ಹೆಬ್ಬಾವನ್ನು ಸೆರೆ ಹಿಡಿದಿದ್ದಾರೆ ಮತ್ತು ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ನೆರವಿನಿಂದ ಸಂರಕ್ಷಿತ ಪ್ರದೇಶಕ್ಕೆ ಹಾವನ್ನು ಬಿಟ್ಟು ಬರಲಾಯಿತು.

Snake

ಸ್ನೇಕ್ ಪುಟ್ಟು ಅವರು ಈವರೆಗೆ ಸುಮಾರು ಮೂರು ಸಾವಿರಕ್ಕೂ ಅಧಿಕ ಹಾವುಗಳನ್ನು ರಕ್ಷಿಸಿದ್ದಾರೆ. ಯಾರಿಂದಲೂ ಹಣ ಪಡೆಯದೇ ಕೇವಲ ವನ್ಯಜೀವಿಗಳ ರಕ್ಷಣೆಗೆ ಮುಂದಾಗಿರುವ ಇವರ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ.  ಇದನ್ನೂ ಓದಿ: ಪ್ರತಿ ವಲಯದಲ್ಲೂ ಸಂಶೋಧನೆ ಅಭಿವೃದ್ಧಿಗೆ ಆದ್ಯತೆ: ಬೊಮ್ಮಾಯಿ

Share This Article
Leave a Comment

Leave a Reply

Your email address will not be published. Required fields are marked *