ಸೂರ್ಯ ಗ್ರಹಣ ಹಿನ್ನೆಲೆ ಮಂಡ್ಯದ ಐತಿಹಾಸಿಕ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Public TV
1 Min Read

ಮಂಡ್ಯ:  ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಸೂರ್ಯ ಗ್ರಹಣ ಬೆಳಗ್ಗೆ 8.5ಕ್ಕೆ ಕಾಣಿಸಿಕೊಳ್ಳಲಿದ್ದು, ಬೆಳಗ್ಗೆ 9.37ಕ್ಕೆ ಗ್ರಹಣದ ಮಧ್ಯಕಾಲ ಇದ್ದು, ಗ್ರಹಣದ ಮೋಕ್ಷ ಕಾಲ 11.8ಕ್ಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನ, ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನ ಹಾಗೂ ನಿಮಿಷಾಂಬ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆ 4 ಗಂಟೆಯಿಂದ 6 ಗಂಟೆವರೆಗೆ ಸುಪ್ರಭಾತ ಸೇವೆ ಹಾಗೂ ಧನುರ್ಮಾಸದ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ. ಬಳಿಕ ಬೆಳಗ್ಗೆ 7 ಗಂಟೆಗೆ ದೇವಸ್ಥಾನದ ಬಾಗಿಲನ್ನು ಮುಚ್ಚಿ ಗ್ರಹಣ ಮುಗಿದ ಬಳಿಕ ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆದು ಶುಚಿತ್ವಗೊಳಿಸಿ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ.

ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದ ಬಾಗಿಲು ಬೆಳಗ್ಗೆ 4.30 ತೆರೆದು 6 ಗಂಟೆಯ ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ದೇವಸ್ಥಾನದ ಬಾಗಿಲು ಹಾಕಲಾಗುತ್ತದೆ. ಗ್ರಹಣ ಮುಗಿದ ಬಳಿಕ 12.30ಕ್ಕೆ ದೇವಸ್ಥಾನದ ಬಾಗಿಲು ತೆರೆದು, ದೇವಸ್ಥಾನವನ್ನು ಶುದ್ಧಿಗೊಳಿಸಿ ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

ಇನ್ನೂ ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನದಲ್ಲೂ ಕೂಡ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಬೆಳಗ್ಗೆ 4 ಗಂಟೆಯಿಂದ ಧನುರ್ಮಾಸದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಲಾಗುತ್ತದೆ. ಬಳಿಕ ಬೆಳಗ್ಗೆ 8 ಗಂಟೆಗೆ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗುತ್ತದೆ. ಗ್ರಹಣ ಮುಗಿದ ಬಳಿಕ 12 ಗಂಟೆಗೆ ದೇವಸ್ಥಾನದ ಬಾಗಿಲು ತೆರೆದು ದೇವಸ್ಥಾನದ ಶುದ್ಧಿಕರಣಗೊಳಿಸಿ ವಿಶೇಷ ಅಭಿಷೇಕ ಹಾಗೂ ಪೂಜೆ ಮಾಡಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *