ಸುಧಾಕರ್ ಏನು ಸಿಎಂಗಿಂತ ದೊಡ್ಡವರಾ? ಬಿಜೆಪಿ ಶಾಸಕ ಕಿಡಿ

Public TV
1 Min Read

ಬಳ್ಳಾರಿ: ಸುಧಾಕರ್ ಏನು ಮುಖ್ಯಮಂತ್ರಿಗಳಿಗಿಂತ ದೊಡ್ಡವರಾ ಎಂದು ಆರೋಗ್ಯ ಸಚಿವರ ವಿರುದ್ಧ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಕೆಂಡಾಮಂಡಲವಾಗಿದ್ದಾರೆ.

ಸ್ವಪಕ್ಷದ ಸಚಿವರ ವಿರುದ್ಧವೇ ಸೋಮಶೇಖರ್ ರೆಡ್ಡಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೆಲ ಸಚಿವರು ದೇವಲೋಕದಿಂದ ಬಂದಿದ್ದೇವೆ ಎನ್ನುವಂತೆ ವರ್ತನೆ ಮಾಡುತ್ತಿದ್ದಾರೆ. ಅವರೇನು ಮೇಲಿಂದ ಬಂದವರೇ? ಅವರು ದೇವಮಾನವರಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಕೆ.ಎಸ್.ಈಶ್ವರಪ್ಪ

ನಿನ್ನೆ ಕಲ್ಯಾಣ ಕರ್ಣಾಟಕದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿತ್ತು. ಕಲ್ಯಾಣ ಕರ್ಣಾಟಕದ ಮೀಸಲಾತಿಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ಸೀಟ್ ಏಕಾಏಕಿ ಕಡಿತ ಮಾಡಲಾಗಿತ್ತು. ಹೀಗಾಗಿ ಆರೋಗ್ಯ ಸಚಿವ ಸುಧಾಕರ್ ಅವರಿಗೆ ನಾನು ಹಲವು ಸಾರಿ ಕರೆ ಮಾಡಿದ್ದೆ. ಅವರ ಪಿಎಗೂ ಕರೆ ಮಾಡಿದೆ. ಬಳಿಕ ಅವರಿಗೆ ಮೆಸೇಜ್ ಸಹ ಹಾಕಿದ್ದೆ. ಆದರೆ ಅವರು ಯಾವುದಕ್ಕೂ ಪ್ರತಿಕ್ರಿಯೆ ನೀಡಿಲ್ಲ. ಇದೇ ವಿಚಾರವಾಗಿ ನಾವು ಸಿಎಂ ಬೊಮ್ಮಾಯಿ ಬಳಿಯೂ ಹೋಗಿದ್ದೆ, ಅವರು ಕೇವಲ 30 ಸೆಕೆಂಡ್‍ನಲ್ಲಿ ಕೆಲಸ ಮಾಡಿಕೊಟ್ಟರು ಎಂದು ತಿಳಿಸಿದ್ದಾರೆ.

ಸುಧಾಕರ್ ಅವರು ಸಿಎಂಗಿಂತ ದೊಡ್ಡವರಾ? ಕೆಲ ಸಚಿವರಿಗೆ ದುರಹಂಕಾರ ಹೆಚ್ಚಾಗಿದೆ. ಅದಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡದ ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಸಿಎಂಗೆ ಮನವಿ ಮಾಡಿರುವೆ ಎಂದಿದ್ದಾರೆ. ಇದನ್ನೂ ಓದಿ: ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಮಂತ್ರವಾದಿ – ಹಣ, ಚಿನ್ನಾಭರಣ ಮಾಯ ಮಾಡಿದ್ದೇನೆ ಎಂದ!

ನಾನು ನನ್ನ ವೈಯಕ್ತಿಕ ವಿಚಾರಕ್ಕೆ ಅವರಿಗೆ ಕರೆ ಮಾಡಿಲ್ಲ. ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರೆ ಮಾಡಿದ್ದೆ. ನಮ್ಮಂಥವರ ವಿಚಾರವಾಗಿಯೇ ಈ ರೀತಿ ನಿರ್ಲಕ್ಷ್ಯ ವಹಿಸಿದರೆ,ಸಾಮಾನ್ಯ ಜನರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *