ಓಂ, ಗೋವು ಪದ ಕೇಳಿದರೆ ಕೆಲವರು ಅಘಾತಗೊಳ್ಳುತ್ತಾರೆ: ಮೋದಿ

Public TV
1 Min Read

ಲಕ್ನೋ: ‘ಹಸು’ ಮತ್ತು ‘ಓಂ’ ನಂತಹ ಪದಗಳನ್ನು ಕೇಳಿದ ಕೆಲವರು ಆಘಾತಕ್ಕೊಳಗಾಗುತ್ತಾರೆ. ಇದು ನಮ್ಮ ದೇಶದಲ್ಲಿ ದುರದೃಷ್ಟಕರ ವಿಷಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಇಂದು ಉತ್ತರ ಪ್ರದೇಶದ ಮಥುರಾದಲ್ಲಿ ನಡೆದ ಜಾನುವಾರುಗಳಿಗೆ ರೋಗ ತಡೆಗಟ್ಟುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಗೋವು ಮತ್ತು ಓಂ ಪದಗಳನ್ನು ಕೇಳಿದರೆ ಕೆಲವರಿಗೆ ಆಗುವುದಿಲ್ಲ. ಈ ಪದಗಳನ್ನು ಕೇಳಿದರೆ ಅವರು ನಮ್ಮ ದೇಶ 16ನೇ ಶತಮಾನಕ್ಕೆ ಹೋಗಿದೆ ಎಂದು ಭಾವಿಸುತ್ತಾರೆ ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮವನ್ನು (ಎನ್‍ಎಡಿಸಿಪಿ) ಮತ್ತು ರೈತರಿಗಾಗಿ ಇತರ ಯೋಜನೆಗಳೊಂದಿಗೆ ಪ್ರಾರಂಭಿಸಿದ ಮೋದಿ ಅವರು, ನಮ್ಮ ದೇಶದ ಗ್ರಾಮೀಣ ಅರ್ಥಿಕತೆಯ ಬಗ್ಗೆ ಪ್ರಾಣಿಗಳಿಲ್ಲದೆ ಮಾತನಾಡಲು ಸಾಧ್ಯವೆ. ಪರಿಸರ ಮತ್ತು ಪ್ರಾಣಿಗಳು ಭಾರತದ ಆರ್ಥಿಕತೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಾವು ಪ್ರಕೃತಿ ಮತ್ತು ಆರ್ಥಿಕ ಪ್ರಗತಿಯ ಬಗ್ಗೆ ಸಮತೋಲನವನ್ನು ಕಾಪಾಡಿಕೊಂಡು ಸಬಲೀಕೃತ ಭಾರತದತ್ತ ಸಾಗಬೇಕು ಎಂದು ಹೇಳಿದರು.

ನಮ್ಮ ಕೇಂದ್ರ ಸರ್ಕಾರ 2024ರ ಅವಧಿಯಲ್ಲಿ 12,652 ಕೋಟಿ ರೂ. ವೆಚ್ಚದಲ್ಲಿ ಒಂದು ಯೋಜನೆಯನ್ನು ಮಾಡಿದ್ದು, ಇದರ ಪ್ರಕಾರ ಕಾಲುಬಾಯಿ ರೋಗಕ್ಕೆ ತುತ್ತಾಗುವ ದನ, ಎಮ್ಮೆ, ಕುರಿ, ಮೇಕೆ ಮತ್ತು ಹಂದಿಗಳು ಸೇರಿದಂತೆ 500 ದಶಲಕ್ಷಕ್ಕೂ ಹೆಚ್ಚು ಪ್ರಾಣಿಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಭಾಗಿಯಾಗಿದ್ದರು.

ಈ ಯೋಜನೆಯಲ್ಲಿ ಬ್ರೂಸೆಲೋಸಿಸ್ ಕಾಯಿಲೆಯ ವಿರುದ್ಧ ಹಸುಗಳಿಗೆ ಲಸಿಕೆ ಹಾಕುವ ಗುರಿಯನ್ನು ಕೂಡ ಹೊಂದಿದ್ದೇವೆ ಎಂದು ಮೋದಿ ಅವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಪಿಎಂ ಮೋದಿ ಅವರು ರೈತರು, ಪಶುವೈದ್ಯಕೀಯ ವೈದ್ಯರು ಮತ್ತು ಪ್ಲಾಸ್ಟಿಕ್ ತ್ಯಾಜ್ಯ ವಿಭಜಕರೊಂದಿಗೆ ವೈಯಕ್ತಿಕವಾಗಿ ಸಂವಹನ ನಡೆಸಿದರು. ಇದರ ಜೊತೆಗೆ ಅವರು ಕಸದಿಂದ ಪ್ಲಾಸ್ಟಿಕ್ ಅನ್ನು ಬೇರ್ಪಡಿಸುವ ಮಹಿಳೆಯರೊಂದಿಗೆ ಕುಳಿತು ಅದರ ಮಹತ್ವವನ್ನು ವಿವರಿಸಿದರು.

Share This Article
Leave a Comment

Leave a Reply

Your email address will not be published. Required fields are marked *