ಹೆತ್ತ ತಾಯಿಯನ್ನ ಕೊಂದು ಶೌಚಾಲಯದ ಗುಂಡಿಯಲ್ಲಿ ಹೂತಿಟ್ಟ ಪಾಪಿ ಮಗ!

Public TV
1 Min Read

ರಾಮನಗರ: ಮಗನೊಬ್ಬ ಜಮೀನಿಗಾಗಿ ಹೆತ್ತ ತಾಯಿಯನ್ನೇ ಕೊಂದು ಶೌಚಾಲಯದ ಗುಂಡಿಯಲ್ಲಿ ಹೂತಿಟ್ಟ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನಾಗವಾರ ಗ್ರಾಮದಲ್ಲಿ ನಡೆದಿದೆ.

ನಾಗಮ್ಮ ಮಗನಿಂದಲೇ ಕೊಲೆಯಾದ ನತದೃಷ್ಟೆ ತಾಯಿ. ಮೃತ ನಾಗಮ್ಮಳ ಮಗ ಸುರೇಶ್ ಕೊಲೆ ಮಾಡಿದ ಪಾಪಿ ಮಗ. ನಾಗಮ್ಮರ ಹೆಸರಿನಲ್ಲಿ 1 ಎಕರೆ 15 ಗುಂಟೆ ಜಮೀನಿತ್ತು. ಈ ಜಮೀನನ್ನು ತನ್ನ ಹೆಸರಿಗೆ ಬರೆದುಕೊಂಡುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ. ಮಗನ ಬಲವಂತಕ್ಕೆ ತಾಯಿ ನಾಗಮ್ಮ ಒಪ್ಪದಿದ್ದರಿಂದ, ಮಗಳ ಮನೆಗೆ ಕರೆದೊಯ್ದು ಬಿಟ್ಟುಬರುವುದಾಗಿ ತಿಳಿಸಿ, ಕರೆದೊಯ್ದು ಕೊಲೆ ಮಾಡಿ ತನ್ನದೇ ಮನೆಯ ಶೌಚಾಲಯದ ಗುಂಡಿಯಲ್ಲಿ ಶವವನ್ನು ಹೂತಿಟ್ಟಿದ್ದಾನೆ.

ತಹಶೀಲ್ದಾರ್ ರಮೇಶ್‍ರ ಸಮ್ಮುಖದಲ್ಲಿ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೇ ಆರೋಪಿ ಸುರೇಶ್‍ನನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದು, ಇದೀಗ ಇಡೀ ಗ್ರಾಮವನ್ನೇ ಬೆಚ್ಚಿ ಬೀಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *