6 ತಿಂಗಳು ಉಚಿತ ಪಡಿತರ ನೀಡಿ, ಯಾರು ಹಸಿವಿಂದ ಬಳಲಬಾರದು: ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಪತ್ರ

Public TV
1 Min Read

ನವದೆಹಲಿ: ಮೂರು ತಿಂಗಳ ಅವಧಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಉಚಿತ ಪಡಿತರವನ್ನು ಸೆಪ್ಟೆಂಬರ್ ವರೆಗೂ ಮುಂದುವರಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆ.

ಎರಡು ಪುಟಗಳ ಪತ್ರ ಬರೆದಿರುವ ಸೋನಿಯಗಾಂಧಿ ಲಾಕ್‍ಡೌನ್ ನಿಂದ ಜನರು ಸಂಕಷ್ಟಕ್ಕೆ ಸಿಗಲಿದ್ದು ಕೇಂದ್ರ ಸರ್ಕಾರ ಉಚಿತ ಪಡಿತರ ನೀಡುತ್ತಿರುವುದು ಉತ್ತಮ ಕೆಲಸ. ಯಾರೂ ಕೂಡಾ ಮುಂದಿನ ದಿನಗಳಲ್ಲಿ ಹಸಿವಿನಿಂದ ಇರಬಾರದು. ಈ ಹಿನ್ನೆಲೆ ಸೆಪ್ಟೆಂಬರ್ ವರೆಗೂ ಉಚಿತ ಪಡಿತರ ನೀಡುವುದನ್ನ ವಿಸ್ತರಿಸಿ ಎಂದು ಮನವಿ ಮಾಡಿದ್ದಾರೆ.

ಆಹಾರ ಭದ್ರತೆ ಕಾಯ್ದೆಯಡಿ 5 ಕೆಜಿ ಬದಲಿಗೆ 10 ಕೆಜಿ ಗೋಧಿ ಅಥವಾ ಅಕ್ಕಿ ಹಾಗೂ ಇತರೆ ಧಾನ್ಯಗಳನ್ನು ನೀಡಿದರೆ ದೀರ್ಘ ಕಾಲದವರೆಗೂ ಜನರಿಗೆ ಉಪಯೋಗವಾಗಲಿದೆ. ಲಾಕ್‍ಡೌನ್ ನಿಂದ ಸುರಕ್ಷಿತ ಕುಟುಂಬಗಳು ಕೂಡಾ ಅಭದ್ರತೆಗೆ ಸಿಲುಕಿದೆ. ಕೊರೊನಾ ವಿರುದ್ಧ ಹೋರಾಟದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *