ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್

Public TV
1 Min Read

– ಹೈಕೋರ್ಟ್ ಸೂಚನೆಗೂ ಗಾಯಕ ಡೋಂಟ್‌ಕೇರ್

ಬೆಂಗಳೂರು: ಕನ್ನಡಿಗರಿಗೆ ಅಪಮಾನ ಪ್ರಕರಣ ಸಂಬಂಧ ಗಾಯಕ ಸೋನು ನಿಗಮ್ ಪೊಲೀಸರ ಜೊತೆ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾರೆ. ಪೊಲೀಸರ ಭೇಟಿಗೆ ಸಮಯ ಕೊಡದೇ ಸೋನು ನಿಗಮ್ (Sonu Nigam) ಸತಾಯಿಸುತ್ತಿದ್ದಾರೆ.

ಹೈಕೋರ್ಟ್ ಸೂಚನೆಗೂ ಕೇರ್ ಮಾಡದ ಗಾಯಕ ಸೋನು ನಿಗಮ್. ಘಟನೆಯಾಗಿ ಒಂದು ತಿಂಗಳು ಕಳೆಯುತ್ತಾ ಬಂದರು ಇನ್ನೂ ಹೇಳಿಕೆ ಕೊಟ್ಟಿಲ್ಲ. ಈ ಹಿಂದೆ ಹೈಕೋರ್ಟ್, ‘ಬಲವಂತದ ಕ್ರಮ ಬೇಡ. ತನಿಖೆಗೆ ಸಹಕರಿಸಿ’ ಎಂದಿತ್ತು. ಇದನ್ನೂ ಓದಿ: EXCLUSIVE | ಲೋಕಾಯುಕ್ತ ಲಂಚ ಪ್ರಕರಣಕ್ಕೆ ಡೈರಿ ಮಿಸ್ಟರಿ – ನಿಂಗಪ್ಪ ಮನೆಯಲ್ಲಿದ್ದ 2 ಡೈರಿ ರಿಕವರಿ

ಅಲ್ಲದೇ ಪೊಲೀಸರಿಗೆ ಸೋನು ಬಳಿಯೇ ತೆರಳಿ ಹೇಳಿಕೆ ದಾಖಲಿಸಿಕೊಳ್ಳಲು ಸೂಚನೆ ನೀಡಿತ್ತು. ಪೊಲೀಸರ ಸತತ ಪ್ರಯತ್ನದ ನಡುವೆಯೂ ಇದುವರೆಗೂ ಸೋನು ನಿಗಮ್ ಪೊಲೀಸರ ಸಂಪರ್ಕಕ್ಕೆ ಸಿಗಲಿಲ್ಲ. ಪೊಲೀಸರು ಕರೆ ಮಾಡಿದಾಗಲೆಲ್ಲ ಸಮಯ ಕೋಡೋದಾಗಿ ಸತಾಯಿಸುತ್ತಿದ್ದಾರೆ. ಇದನ್ನೂ ಓದಿ: ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಸಿನಿಮಾ ರಿಲೀಸ್‌ಗೆ ಸುಪ್ರೀಂ ಸೂಚನೆ

ಹಾಗಾದ್ರೆ ಹೈಕೋರ್ಟ್ ಮಾತಿಗೆ ಸೋನು ನಿಗಮ್ ಬೆಲೆ ನೀಡುತ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ಸದ್ಯ ಇನ್ನೆರೆಡು ದಿನ ಕಾದು ನೋಡಲು ಪೊಲೀಸರು ಚಿಂತನೆ ನಡೆಸಿದ್ದು, ನಂತವೂ ಸಮಯ ಕೊಟ್ಟಿಲ್ಲ ಅಂದರೆ ಕೋರ್ಟ್ ಗಮನಕ್ಕೆ ತರಲು ಅವಲಹಳ್ಳಿ ಪೊಲೀಸರು (Avalahlli Police) ನಿರ್ಧಾರ ಮಾಡಿದ್ದಾರೆ.

Share This Article