ಅತ್ಯಾಚಾರ, ಕೊಲೆ ಪ್ರಕರಣ- ಸೌಜನ್ಯ ತಾಯಿ, ಆರೋಪ ಹೊತ್ತವರೂ ಅಣ್ಣಪ್ಪನ ಬೆಟ್ಟಕ್ಕೆ ಭೇಟಿ, ಪ್ರಾರ್ಥನೆ

Public TV
2 Min Read

ಮಂಗಳೂರು: ಹನ್ನೊಂದು ವರ್ಷಗಳ ಬಳಿಕ ಮತ್ತೆ ಮುನ್ನೆಲೆಗೆ ಬಂದ ಧರ್ಮಸ್ಥಳದ ಸೌಜನ್ಯಾ (Soujanya Murder Case) ಅತ್ಯಾಚಾರ, ಕೊಲೆ ಪ್ರಕರಣ ಇದೀಗ ಮುಂಜುನಾಥನ ಸನ್ನಿಧಿ ಬಳಿಯಲ್ಲಿರುವ ಅಣ್ಣಪ್ಪನ ಬೆಟ್ಟದವರೆಗೆ (Annappa Swamy Betta) ಹೋಗಿದೆ.

ಹೌದು. ಇಂದು ಸೌಜನ್ಯ ತಾಯಿ (Soujanya Mother Kusumavathi) ಹಾಗೂ ಆರೋಪ ಹೊತ್ತವರು ಕೂಡ ಅಣ್ಣಪ್ಪನ ಬೆಟ್ಟಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೊದಲು ನೇತ್ರಾವತಿಯಿಂದ ಧರ್ಮಸ್ಥಳದವರೆಗೆ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗಳ ಕಾರ್ಯಕರ್ತರು ಪಾದಯಾತ್ರೆ ನಡೆಸಿದ್ದಾರೆ. ಈ ಪಾದಯಾತ್ರೆಯಲ್ಲಿ ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಸೌಜನ್ಯ ತಾಯಿ ಕುಸುಮಾವತಿ ಕೂಡ ಸೇರಿಕೊಂಡಿದ್ದಾರೆ. ನೇತ್ರಾವತಿಯಿಂದ ಧರ್ಮಸ್ಥಳದವರೆಗೆ ಪಾದಯಾತ್ರೆ ಮಾಡಿ, ನಂತರ ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗಕ್ಕೆ ತೆರಳಿದೆ.

ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಕಣ್ಣೀರಿಟ್ಟ ಸೌಜನ್ಯ ತಾಯಿ ಕುಸುಮಾವತಿ, ಅಣ್ಣಪ್ಪನಿಗೆ ನಾಣ್ಯ ಕಾಣಿಕೆ ಹಾಕಿ ಪ್ರಾರ್ಥನೆ ಸಲ್ಲಿಸಿದರು. ವಿಹಿಂಪ, ಬಜರಂಗಳ ಮುಖಂಡರ ಜೊತೆಗೂಡಿ ನೈಜ ಆರೋಪಿಗಳ ಪತ್ತೆ ಮಾಡಿಕೊಡುವಂತೆ ಅಣ್ಣಪ್ಪನಲ್ಲಿ ಬೇಡಿಕೊಂಡರು. ಕುಸುಮಾವತಿ ಪ್ರಾರ್ಥನೆಯ ಬಳಿಕ ಸೌಜನ್ಯ ತಾಯಿ ಆರೋಪಿಸಿದವರು ಕೂಡ ಪ್ರಾರ್ಥನೆ ಸಲ್ಲಿಸಲು ಬಂದಿದ್ದಾರೆ. ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಜೈನ್ ಕೂಡ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬಂದು, ಈ ಪ್ರಕರಣದಲ್ಲಿ ನಮ್ಮ ಯಾವುದೇ ಪಾತ್ರ ಇಲ್ಲ. ನಮ್ಮ ಹೆಸರನ್ನು ಅನಾವಶ್ಯಕವಾಗಿ ಎಳೆದು ತರಲಾಗಿದೆ ಎಂದು ಕೈಮುಗಿದಿದ್ದಾರೆ. ಇದನ್ನೂ ಓದಿ: ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸ್ಬೋದು: ವಸಂತ ಬಂಗೇರ

ಒಟ್ಟಿನಲ್ಲಿ ಸಾವಿರಾರು ಜನರ ಮುಂಭಾಗ ಇಂದು ಎರಡೂ ಕಡೆಯವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿತ್ತು. ಸೌಜನ್ಯ ತಾಯಿ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಬರುವಾಗ ಗೊಂದಲ ಆಗದಂತೆ ಕ್ರಮವಹಿಸಲಾಗಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್