ಖುರ್ಚಿಯಿಂದ ಇಳಿಯುತ್ತಿದ್ದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಶಾಕ್ !

Public TV
1 Min Read

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಶಾಕ್ ನೀಡಿದ್ದಾರೆ.

ಇವತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಯಡಿಯೂರಪ್ಪ ಸರ್ಕಾರ ಮಾಡಿದ್ದ ಪೊಲೀಸ್ ಅಧಿಕಾರಿಗಳ ವರ್ಗಾವಣೆ ರದ್ದುಗೊಳಿಸಿ ಆದೇಶವನ್ನು ಹೊರಡಿಸಿದ್ದಾರೆ.

ಯಡಿಯೂರಪ್ಪ ತಾವು ಸಿಎಂ ಆದ ಬಳಿಕ ಚಿಕ್ಕಮಗಳೂರಿನ ಎಸ್‍ಪಿ ಅಣ್ಣಾಮಲೈ ಅವರನ್ನು ದಿಢೀರ್ ಅಂತಾ ರಾಮನಗರಕ್ಕೆ ವರ್ಗಾವಣೆ ಮಾಡಿದ್ರು. ಇತ್ತ ಶನಿವಾರ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವಲ್ಲಿ ವಿಫಲವಾದ ಕಾರಣ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ರು.

ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರೈತರ ಸಾಲಮನ್ನಾ ಮಾಡುವ ಚಿಂತನೆ ನಡೆಸಿದ್ದರು. ಆದ್ರೆ ಸುಪ್ರೀಂ ಕೋರ್ಟ್ ಸಾಬೀತು ಮಾಡುವ ಮುನ್ನ ಯಡಿಯೂರಪ್ಪ ಯಾವುದೇ ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುವಂತಿಲ್ಲ ಅಂತಾ ಅದೇಶಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *