ಸ್ಪಂದನಾ ಮೃತದೇಹ ನಾಳೆ ಬೆಂಗಳೂರಿಗೆ, ಬುಧವಾರ ಅಂತ್ಯಕ್ರಿಯೆ

By
1 Min Read

ಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ ನಲ್ಲಿ ಮುಗಿದಿದ್ದು, ಮೃತ ದೇಹವನ್ನು (Dead Body) ನಾಳೆ ಸಾಯಂಕಾಲ ಬೆಂಗಳೂರಿಗೆ ತರಲಾಗುವುದು ಎಂದಿದ್ದಾರೆ ಸ್ಪಂದನಾ ಚಿಕ್ಕಪ್ಪ ಬಿ.ಕೆ. ಹರಿಪ್ರಸಾದ್. ಇಂದು ಮರಣೋತ್ತರ (Postmortem) ಪರೀಕ್ಷೆ ಮುಗಿದಿದ್ದರೂ, ಇನ್ನೂ ಹಲವು ವಿದೇಶಿ ಪ್ರಕ್ರಿಯೆಗಳು ನಡೆಯಬೇಕಿವೆ. ಅವು ನಾಳೆ ಮಧ್ಯಾಹ್ನ ಪೂರ್ಣಗೊಳ್ಳಲಿವೆಯಂತೆ.

‘ಸ್ಪಂದನಾ ಸಾವಿನ ಕುರಿತಂತೆ ಬ್ಯಾಂಕಾಕ್ ಪ್ರಕ್ರಿಯೆಗಳು ಮುಗಿಯಲು ನಾಳೆ ಮಧ್ಯಾಹ್ನ ಆಗುತ್ತದೆ. ಆದ್ದರಿಂದ ಪ್ರಕ್ರಿಯೆಗಳು ಮುಗಿಸಿ ಮೃತದೇಹ ಸಂಜೆ ಹೊರಡಲಾಗುತ್ತದೆ. ರಾತ್ರಿಯ ಒಳಗೆ ಮೃತ ದೇಹ ಬೆಂಗಳೂರಿಗೆ ಬರಲಿದೆ. ಬೆಂಗಳೂರಿನಿಂದ (Bangalore) ಕೆಲವರು ಅಲ್ಲಿಗೆ ಹೋಗೋಣ ಎಂದುಕೊಂಡಿದ್ದೆವು. ಆದ್ರೆ ನಾವು ಹೋಗೋ ಅಷ್ಟರಲ್ಲಿ ಸಮಯ ಆಗುತ್ತೆ. ಆದ್ರಿಂದ ನಾವ್ಯಾರೂ ಇಲ್ಲಿಂದ ಹೋಗ್ತಾ ಇಲ್ಲ. ನಾಳೆ ರಾತ್ರಿ 11:30ರ ಹೊತ್ತಿಗೆ ಮೃತ ದೇಹ ಬರಬಹುದು. ಬುಧವಾರ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ’ ಎಂದಿದ್ದಾರೆ ಹರಿಪ್ರಸಾದ್.

ಅಂತ್ಯಸಂಸ್ಕಾರ (Funeral) ಎಲ್ಲಿ ನಡೆಯಬೇಕು ಎನ್ನುವ ಕುರಿತು ಯಾವುದೇ ನಿರ್ಧಾರ ಈವರೆಗೂ ತೆಗೆದುಕೊಂಡಿಲ್ಲ ಎಂದಿರುವ ಹರಿಪ್ರಸಾದ್, ಯಾವ ಸ್ಥಳದಲ್ಲಿ ಮತ್ತು ಸಮಯದಲ್ಲಿ ಅಂತ್ಯ ಸಂಸ್ಕಾರ ಮಾಡಬೇಕು ಎನ್ನುವುದನ್ನು ಚರ್ಚಿಸಿ ತಿಳಿಸುತ್ತೇವೆ ಎಂದಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಅದನ್ನು ಮಾಧ್ಯಮಗಳಿಗೆ ನೀಡುವ ಕುರಿತು ಮಾತನಾಡಿದ್ದಾರೆ.

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್