ಬೆಂಗಳೂರು–ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

Public TV
1 Min Read

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06255 ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ ಅ.18, 21 ಮತ್ತು 25 ರಂದು ಬೆಳಗ್ಗೆ 8:05 ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು, ಅದೇ ದಿನ ಮಧ್ಯಾಹ್ನ 2:45 ಗಂಟೆಗೆ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣವನ್ನು ತಲುಪಲಿದೆ. ಈ ರೈಲಿಗೆ ಮಾರ್ಗದಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ಪೇಟೆ, ಕಾಟ್ಪಾಡಿ, ಅರಕ್ಕೋಣಂ ತಿರುವಳ್ಳೂರ್ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ. ಇದನ್ನೂ ಓದಿ: ಅನ್ನಭಾಗ್ಯ | 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ

ರೈಲು ಸಂಖ್ಯೆ 06256 ಎಂಜಿಆರ್ ಚೆನ್ನೈ ಸೆಂಟ್ರಲ್–ಕೆಎಸ್‌ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಅ.18, 21 ಮತ್ತು 25 ರಂದು ಸಂಜೆ 4:30 ಕ್ಕೆ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಟು, ಅದೇ ದಿನ ರಾತ್ರಿ 10:45 ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣ ತಲುಪಲಿದೆ.

ಈ ರೈಲಿಗೆ ಮಾರ್ಗದಲ್ಲಿ ತಿರುವಳ್ಳೂರ್, ಅರಕ್ಕೋಣಂ, ಕಾಟ್ಪಾಡಿ, ಜೋಲಾರ್ಪೇಟೆ, ಬಂಗಾರಪೇಟೆ, ಕೃಷ್ಣರಾಜಪುರಂ ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ. ಈ ರೈಲು 11 ಸಾಮಾನ್ಯ ದ್ವಿತೀಯ ದರ್ಜೆಯ ಕೋಚ್‌ಗಳು, 1 ಎಸಿ ಚೇರ್ ಕಾರ್, 1 ಎಸಿ 3-ಟೈರ್ ಕೋಚ್, 4 ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಕೋಚ್‌ಗಳು ಹಾಗೂ 2 ಎಸ್‌ಎಲ್‌ಆರ್‌ಡಿ ಕೋಚ್‌ಗಳನ್ನು ಒಳಗೊಂಡಿರುತ್ತದೆ. ಇದನ್ನೂ ಓದಿ: ಬಿಗ್ ಬಾಸ್‌ಗೆ ಬೀಗ ಹಾಕಿದ್ದಕ್ಕೂ `ನಟ್ಟು ಬೋಲ್ಟ್’ ಹೇಳಿಕೆಗೂ ಸಂಬಂಧವಿಲ್ಲ: ಶಿವರಾಜ್ ತಂಗಡಗಿ

Share This Article