ಖಾಕಿಗಳಿಗೆ ಸರ್ಕಾರದಿಂದ ವೇತನ ಹೆಚ್ಚಳದ ಉಡುಗೊರೆ!

Public TV
1 Min Read

ತುಮಕೂರು: ಖಾಕಿಗಳಿಗೆ ಸರ್ಕಾರದಿಂದ ವೇತನ ಹೆಚ್ಚಳದ ಉಡುಗೊರೆ ಸಿಕ್ಕಿದೆ. ಮುಂದಿನ ಬಜೆಟ್ ನಲ್ಲಿ ವೇತನವನ್ನು ಹೆಚ್ಚಿಸಲಾಗುವುದು ಎಂದು ಗೃಹ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಗುರು ಸೇವೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಕ್ಕೆ ಮುಂದಿನ ಬಜೆಟ್ ನಲ್ಲಿ ಔರದ್ಕರ್ ವರದಿ ಜಾರಿ ಮಾಡಿ ಪೊಲೀಸರ ಬದುಕು ಹಸನು ಮಾಡುವ ಯೋಜನೆ ರೂಪಿಸುವುದಾಗಿ ಗೃಹ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಕೊನೆಯ ದರ್ಶನಕ್ಕೆ ಲಕ್ಷಾಂತರ ಜನರು ಬಿಸಿಲ ಧಗೆ, ಕತ್ತಲೆಯ ಮೌನ, ಮುಂಜಾವು ಯಾವುದನ್ನು ಲೆಕ್ಕಿಸದೇ ಜನರು ಮಠದ ಆವರಣದಲ್ಲಿ ಸೇರಿದ್ದರು. ಲಕ್ಷಾಂತರ ಜನ ಸೇರಿದರೂ ಕಿಂಚಿತ್ತೂ ಮಠದ ಆವರಣದಲ್ಲಿ ಶಿಸ್ತಿಗೆ ಲೋಪ ಬಾರದಂತೆ, ಕಾನೂನಿಗೆ ಧಕ್ಕೆ ಬಾರದಂತೆ ನಡೆದಾಡುವ ದೇವರನ್ನು ಶ್ರದ್ಧೆ ಭಕ್ತಿ ಪ್ರೀತಿಯಿಂದ ಅಂತಿಮ ವಿಧಿವಿಧಾನ ನಡೆಸಲಾಯಿತು. ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಕಾಯಕ ಯೋಗಿಯ ವಿಧಿವಿಧಾನ ನಡೆಯಿತು. ಇದನ್ನೂ ಓದಿ:  ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

ತುಮಕೂರು ಪೊಲೀಸರ ಜೊತೆ ಚಿಕ್ಕಬಳ್ಳಾಪುರ ಹಾಗೂ ಸುತ್ತಮುತ್ತ ಜಿಲ್ಲೆಯ ಸುಮಾರು ಮೂವತ್ತು ಸಾವಿರದಷ್ಟು ಪೊಲೀಸರ ದಂಡು ಸ್ಥಳದಲ್ಲಿ ನಿಯೋಜನೆಗೊಂಡಿತ್ತು. ಪೊಲೀಸ್ ಮಹಾನಿರ್ದೇಶಕಿ ನೀಲಮಣಿರಾಜು, ಕಮಲ್ ಪಂಥ್, ಐಜಿ ದಯಾನಂದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಂ ಹೂಡಿ ಪ್ರತಿ ಕ್ಷಣವೂ ಮಾರ್ಗದರ್ಶನ ಕೊಡುತ್ತಿದ್ದರು. ಪೇದೆಗಳು ಒಂದು ಕ್ಷಣವೂ ವಿರಮಿಸದೇ ಪಾಳಿಗಳನ್ನು ಲೆಕ್ಕಿಸದೇ ಕೆಲಸ ಮಾಡಿದ್ದಾರೆ.

ಪೊಲೀಸರ ಕಾರ್ಯಕ್ಕೆ ಸಿಎಂ ಕುಮಾರಸ್ವಾಮಿ ಸಹ ಮೆಚ್ಚುಗೆ ಸೂಚಿಸಿದ್ದಾರೆ. ಶ್ರೀಗಳಿಗೆ ಸರ್ಕಾರದ ಗೌರವ ವಂದನೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಕುಮಾರಸ್ವಾಮಿ, ಭಕ್ತರು ಶ್ರೀಗಳ ದರ್ಶನ ಹಾಗೂ ಅಂತಿಮ ಕ್ರಿಯಾ ವಿಧಾನವರೆಗೂ ಪೊಲೀಸ್ ಇಲಾಖೆಗೆ ಸಹಕಾರ ನೀಡಿ ಶಾಂತಿಯಿಂದ ನಡೆದುಕೊಂಡ ಕಾರಣ ಧನ್ಯವಾದ ತಿಳಿಸಿದರು. ಅಲ್ಲದೇ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದ ಪೊಲೀಸ್ ಇಲಾಖೆಯ ಕಾರ್ಯವನ್ನು ಶ್ಲಾಘಿಸಿ ಔರಾದ್ಕಾರ್ ವರದಿ ಜಾರಿ ಮಾಡುವುದಕ್ಕೆ ಶ್ರಮಿಸುತ್ತೇನೆ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *