ಇನ್ನೂ ಪತ್ತೆಯಾಗದ ಕರಿ ಚಿರತೆ- ಪೊಲೀಸರಿಂದ ವಿಶೇಷ ತಂಡ ರಚನೆ

Public TV
1 Min Read

ಬೆಂಗಳೂರು: ಎಫ್‍ಐಆರ್ ದಾಖಲಾದ ಬಳಿಕ ದುನಿಯಾ ವಿಜಯ್ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.

ಕರ್ತವ್ಯಕ್ಕೆ ಅಡ್ಡಿ ಹಾಗೂ ಆರೋಪಿ ಪರಾರಿಯಾಗಲು ಸಹಕರಿಸಿದ್ದಕ್ಕೆ ನಟ ದುನಿಯಾ ವಿಜಯ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಎಫ್‍ಐಆರ್ ದಾಖಲಾಗುತ್ತಿದ್ದಂತೆ ವಿಜಯ್ ಪರಾರಿಯಾಗಿದ್ದರು. ಇದನ್ನೂ ಓದಿ: ಚಿತ್ರನಟ ದುನಿಯಾ ವಿಜಯ್ ಮೇಲೆ ಎಫ್‍ಐಆರ್

ಮೊದಲು ಮಾಸ್ತಿಗುಡಿ ದುರಂತಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ ಪಿ.ಗೌಡ ಬಂಧನಕ್ಕೆ ಕೋರ್ಟ್ ಆದೇಶಿಸಿತ್ತು. ಪೊಲೀಸರು ನಿರ್ಮಾಪಕರ ಬಂಧನಕ್ಕೆ ತೆರಳಿದ್ದಾಗ ಸ್ಥಳದಲ್ಲಿದ್ದ ದುನಿಯಾ ಸುಂದರ ಪರಾರಿಯಾಗಲು ಸಹಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಎಫ್‍ಐಆರ್ ದಾಖಲಾದ ಬಳಿಕ ವಿಜಯ್ ಮೊಬೈಲ್ ಸ್ವಿಚ್ ಆಫ್, ನಾಪತ್ತೆ!

ಪರಾರಿಯಾಗಿದ್ದ ನಿರ್ಮಾಪಕ ಸುಂದರ ಪಿ. ಗೌಡ ಅವರಿಗೆ ರಾಮನಗರ ಜೆಎಂಎಫ್‍ಸಿ ಕೋರ್ಟ್ ಜಾಮೀನು ನೀಡಿದೆ. ಇತ್ತ ಇದುವರೆಗೂ ಜಾಮೀನು ಸಿಗದ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ನಾಪತ್ತೆಯಾಗಿದ್ದಾರೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ವಿಶೇಷ ತಂಡ ರಚನೆ ಮಾಡಿ ದುನಿಯಾ ವಿಜಯ್ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಮಾಸ್ತಿಗುಡಿ ನಿರ್ಮಾಪಕ ಇಂದು ಕೋರ್ಟ್ ಲ್ಲಿ ಹಾಜರ್!

Share This Article
Leave a Comment

Leave a Reply

Your email address will not be published. Required fields are marked *