ಪ್ರಧಾನಿ ಮೋದಿ ವಿರುದ್ಧ ಪತ್ರ ಚಳುವಳಿ – ಪ್ರಮೋದ್ ಮುತಾಲಿಕ್ ಎಚ್ಚರಿಕೆ

Public TV
2 Min Read

ಬೆಳಗಾವಿ: ರಾಮ ಮಂದಿರ ನಿರ್ಮಾಣ ಸುಗ್ರೀವಾಜ್ಞೆ ಕುರಿತು ಪ್ರಧಾನಿ ಮೋದಿ ಅವರು ನೀಡಿರುವ ಹೇಳಿಕೆಯನ್ನು ವಿರೋಧಿಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಚುನಾವಣೆ ದಿನಾಂಕ ಘೋಷನೆಗೂ ಮುನ್ನ ಸುಗ್ರೀವಾಜ್ಞೆ ಜಾರಿ ಮಾಡದಿದ್ದರೆ ಪತ್ರ ಚಳುವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹುಕ್ಕೇರಿ ಪಟ್ಟಣದಲ್ಲಿ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಮುತಾಲಿಕ್, ಅಯೋಧ್ಯೆ ರಾಮಮಂದಿರಕ್ಕೆ ಸುಗ್ರೀವಾಜ್ಞೆ ಇಲ್ಲ ಎಂಬ ಪ್ರಧಾನಿಗಳ ಹೇಳಿಕೆಯನ್ನು ನಾನು ಒಪ್ಪೋದಿಲ್ಲ. ಶ್ರೀ ರಾಮ ಸೇನೆ ಈ ಹೇಳಿಕೆಯನ್ನ ವಿರೋಧಿಸುತ್ತದೆ. ಶ್ರೀ ರಾಮ ಜನ್ಮ ಸ್ಥಳದಲ್ಲಿ ಮೋದಿ ಮಂದಿರ ನಿರ್ಮಾಣ ಮಾಡುತ್ತಾರೆ ಎನ್ನುವುದು ಹಿಂದೂಗಳ ಇಚ್ಛೆ ಆಗಿತ್ತು. ಆದರೆ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಮಾಡುವುದಿಲ್ಲ ಎನ್ನುವ ಮೋದಿ ಅವರ ಹೇಳಿಕೆ ಸರಿಯಲ್ಲ ಎಂದರು.

ಸುಪ್ರೀಂ ಕೋರ್ಟ್ ಈ ಬಗ್ಗೆ ಹೇಳುವುದಾದರೆ ಆಂದೋಲನ ಏಕೆ ಮಾಡಬೇಕಿತ್ತು. ರಾಮಮಂದಿರ ಆಂದೋಲನದಿಂದ ಬಿಜೆಪಿ ಪಕ್ಷ ಹಾಗೂ ಮೋದಿ ಅವರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂಬುವುದನ್ನು ಮರೆತಂತೆ ಇದೆ. ಅಧಿಕಾರಕ್ಕೆ ಬಂದ ಬಳಿಕ ರಾಮ ಮಂದಿರ ನಿರ್ಮಾಣ ಮಾಡುವ ವಿಶ್ವಾಸ ಇತ್ತು. ಆದರೆ ಅವರ ಈ ನಿರ್ಧಾರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ತಿಳಿಸಿದರು.

2019ರ ಲೋಕಸಭಾ ಚುನಾವಣೆಯಲ್ಲಿ ಈ ಹೇಳಿಕೆ ಬಿಜೆಪಿ ಪಕ್ಷಕ್ಕೆ ಬಹಳ ಹೊಡೆತ ಬೀಳಲಿದೆ ಎಂದು ಭವಿಷ್ಯ ನುಡಿದ ಮುತಾಲಿಕ್, ರಾಮ ಮಂದಿರ ನಿರ್ಮಾಣ ವಿಳಂಬಕ್ಕೆ ಕಾಂಗ್ರೆಸ್ ಪಕ್ಷದ ವಕೀಲರು ಕಾರಣ ಎಂಬ ಸಬೂಬು ಹೇಳುವುದು ಬೇಡ. ಬೇರೆ ಅವರ ಮೇಲೆ ಆಪಾದನೆ ಮಾಡಿ ಮೋದಿ ಅವರು ತಪ್ಪಿಸಿಕೊಳ್ಳಬಾರದು. ಲೋಕಸಭಾ ಚುನಾವಣೆಗೆ ದಿನಾಂಕ ಸೂಚಿಸಿವ ಮುನ್ನ ಕೇಂದ್ರ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ತಂದು ಮಂದಿರ ನಿರ್ಮಾಣ ಮಾಡುವಂತೆ ಆಗ್ರಹ ಮಾಡುತ್ತೇವೆ. ಇಲ್ಲವಾದಲ್ಲಿ ಮೋದಿ ಅವರ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಪತ್ರ ಚಳುವಳಿ ಆರಂಭಿಸುತ್ತೇವೆ. ಒಂದು ಲಕ್ಷಕ್ಕೂ ಹೆಚ್ಚು ಪತ್ರಗಳನ್ನು ಪ್ರಧಾನಿ ಮೋದಿ ಅವರ ಮನೆ ಬಾಗಿಲಿಗೆ ಬೀಳುವಂತೆ ಚಳುವಳಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *