ಮುತಾಲಿಕ್ ವಿರುದ್ಧ ಅಭ್ಯರ್ಥಿ ಹಾಕಿದ್ರೆ ಸಿ.ಟಿ.ರವಿ ವಿರುದ್ಧವೂ ಅಭ್ಯರ್ಥಿ : ಶ್ರೀರಾಮಸೇನೆ ಎಚ್ಚರಿಕೆ

Public TV
1 Min Read

ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ (Udupi) ಜಿಲ್ಲೆಯ ಕಾರ್ಕಳ ಕ್ಷೇತ್ರದಲ್ಲಿ ಶ್ರೀರಾಮಸೇನೆ (Sri Rama Sene) ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ವಿರುದ್ಧ ಬಿಜೆಪಿ (BJP) ಅಭ್ಯರ್ಥಿ ಹಾಕದಂತೆ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಂಜಿತ್‌ ಶೆಟ್ಟಿ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್  ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸೂಕ್ತ ವ್ಯಕ್ತಿಯೆಂದು ನಿರ್ಧಾರವಾಗಿದೆ. ಹಾಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸದೆ ಪ್ರಮೋದ್ ಮುತಾಲಿಕ್ ಅವರನ್ನು ಬೆಂಬಲಿಸುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ, ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಹಿಂದೂ ಸಂಘಟನೆಗಳು ಗಂಭೀರ ನಿಲುವು ತೆಗೆದುಕೊಳ್ಳುತ್ತೇವೆ. ಸಿ.ಟಿ ರವಿಯ (CT Ravi) ವಿರುದ್ಧವೂ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮುತಾಲಿಕ್ 47 ವರ್ಷಗಳಿಂದ ಮನೆ ಬಿಟ್ಟು ಬ್ರಹ್ಮಚಾರಿಯಾಗಿ ಸಮಾಜವೇ ಕುಟುಂಬ, ದೇಶವೇ ನನ್ನ ಮನೆ ಎಂದು ದೇಶ, ಧರ್ಮಕ್ಕಾಗಿ ಹೋರಾಡುತ್ತಿದ್ದಾರೆ. ಈ ಹಿಂದೆ ಬಹಳಷ್ಟು ರಾಜಕೀಯ ಅವಕಾಶವಿದ್ದಾಗಲೂ ತಿರಸ್ಕರಿಸಿದ್ದರು. ‌ಭ್ರಷ್ಟಾಚಾರ, ಹಿಂದೂ ವಿರೋಧಿ ನೀತಿ, ಹಿಂದೂ ನಾಯಕರು ಮತ್ತು ಕಾರ್ಯಕರ್ತರ ಕಡೆಗಣನೆ, ಅನವಶ್ಯಕ ದೂರು ದಾಖಲು ಮುಂತಾದ ರೀತಿಯಲ್ಲಿ ವ್ಯವಸ್ಥೆ ಹದಗೆಟ್ಟಿದೆ. ಹಾಗಾಗಿ ಪ್ರಾಮಾಣಿಕ, ಬದ್ಧತೆಯ ಜನಪ್ರತಿನಿಧಿಗಳನ್ನು ಸಮಾಜ ನಿರೀಕ್ಷಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ನ್ಯುಮೋನಿಯಾ ಚಿಕಿತ್ಸೆ ಎಂದು 3 ತಿಂಗಳ ಮಗುವಿನ ಹೊಟ್ಟೆಗೆ 51 ಬಾರಿ ಕಾದ ರಾಡ್ ಇಟ್ರು!

ಬಿಜೆಪಿ ಬೆಳವಣಿಗೆಯಲ್ಲಿ ಪ್ರಮೋದ್ ಮುತಾಲಿಕ್ ಪಾತ್ರವೂ ಇದೆ. ಉತ್ತರ ಕರ್ನಾಟಕ, ಕರಾವಳಿಯಲ್ಲಿ ಬಿಜೆಪಿ ನೆಲೆಯೂರಲು ಅವರೇ ಕಾರಣ ಎನ್ನುವುದು ಸಮಾಜಕ್ಕೆ ತಿಳಿದಿದೆ. ಹಾಗಾಗಿ ಪ್ರಮೋದ್ ಮುತಾಲಿಕ್ ಅವರನ್ನು ಬೆಂಬಲಿಸುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ 2 ವಿಕೆಟ್ ಪತನ- ಕಾಂಗ್ರೆಸ್ ಸೇರ್ತಾರಾ ಶಿವಲಿಂಗೇಗೌಡ, ಎಟಿಆರ್?

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *