ಶ್ರೀಶೈಲ ಪೀಠದ ಸ್ವಾಮೀಜಿಗಳಿಂದ ಮೋದಿಗೆ ಅಭಿನಂದನೆ

Public TV
1 Min Read

ಚಿಕ್ಕೋಡಿ(ಬೆಳಗಾವಿ): ಪ್ರಸಿದ್ಧ ಧಾರ್ಮಿಕ ಪಂಚಪೀಠಗಳಲ್ಲಿ ಒಂದಾದ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರಕ್ಕೆ ಬರಲು ಪ್ರಧಾನಿ ಮೋದಿಯವರು ರೈಲ್ವೆ ಕೊಡುಗೆ ನೀಡಿದ್ದಕ್ಕೆ ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಅಭಿನಂದಿಸಿದರು.

ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದಕ್ಷಿಣ ಮಧ್ಯ ರೈಲ್ವೆ ವಿಭಾಗದ ಮ್ಯಾನೇಜರ್ ವಿನೋದ್ ಕುಮಾರ್ ಯಾದವ್ ಅವರು ಸಮೀಕ್ಷೆ ನಡೆಸಿ ಹೈದರಾಬಾದ್-ಜಡಚರ್ಲಾ-ಅಚ್ಛಂಪೇಠ ಮಾರ್ಗವಾಗಿ ಶ್ರೀಶೈಲಂ ತಲುಪುವ ರೈಲು ಮಾರ್ಗಕ್ಕೆ ಹಸಿರು ನಿಶಾನೆ ಸಿಕ್ಕಿದೆ. 1, 307 ಕೋಟಿ ವೆಚ್ಚದಲ್ಲಿ 171 ಕಿ.ಮೀ ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ಮಂಜೂರಾತಿ ಮಾಡಿ ಶಂಕುಸ್ಥಾಪನೆಯನ್ನೂ ಸಹ ನೆರವೇರಿಸಲಾಗಿದೆ ಅಂತ ಹೇಳಿದ್ರು.

ಈ ಯೋಜನೆಯಿಂದ ಶ್ರೀಶೈಲಕ್ಕೆ ಬರುವ ಕರ್ನಾಟಕ, ತೆಲಂಗಾಣ ಆಂಧ್ರ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ. ಈ ಮಹತ್ವದ ಯೋಜನೆ ಜಾರಿಗೊಳಿಸಲು ಕಾರಣಿಕರ್ತರಾದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಯನ್ನ ಸ್ವಾಮೀಜಿ ಸಲ್ಲಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *