1948ರಲ್ಲಿ ಪಾಕಿಸ್ತಾನಿ ಮೂಲಭೂತವಾದಿಗಳಿಂದ ಹಾನಿಗೊಳಗಾಗಿದ್ದ ಶಾರದಾ ಮಂದಿರ ಪುನರ್‌ ನಿರ್ಮಾಣ – ಶೃಂಗೇರಿ ಶ್ರೀ ಭೇಟಿ

Public TV
1 Min Read

ಚಿಕ್ಕಮಗಳೂರು: 1948ರಲ್ಲಿ ಪಾಕಿಸ್ತಾನಿ ಮೂಲಭೂತವಾದಿಗಳ ಆಕ್ರಮಣದಿಂದ ಸಂಪೂರ್ಣ ಹಾನಿಗೊಳಗಾಗಿದ್ದ ಪಾಕ್‌ ಆಕ್ರಮಿತ ಕಾಶ್ಮೀರದ ತೀತ್ವಾಲ್‌ನಲ್ಲಿರುವ ಶಾರದಾ ಮಂದಿರವನ್ನು ಪುನರ್‌ ನಿರ್ಮಾಣ ಮಾಡಲಾಗಿದ್ದು, ಅಲ್ಲಿಗೆ ಶೃಂಗೇರಿ ಶ್ರೀಗಳು ಭೇಟಿ ನೀಡಿದ್ದಾರೆ.

ತೀತ್ವಾಲ್‌ನಲ್ಲಿ ಸ್ಥಾಪನೆಗೊಂಡಿರುವ ಶಾರದಾಂಬೆ ವಿಗ್ರಹಕ್ಕೆ ಶೃಂಗೇರಿಯ ಗುರುವತ್ರಯರಾದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಅವರು ಪ್ರತಿಷ್ಠಾಪನಾ ಪೂಜೆ ನೆರವೇರಿಸಲಿದ್ದಾರೆ. ಪಂಚಲೋಹದ ವಿಗ್ರಹಕ್ಕೆ ಪೂಜೆ ಮಾಡಲಿದ್ದಾರೆ. ಅಲ್ಲದೇ ಇದೇ ಜೂ.5 ರಂದು ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಲಿವೆ. ಇದನ್ನೂ ಓದಿ: ಪಂಚ ಗ್ಯಾರಂಟಿಗೆ ಪಿಎಂ ಕಿಸಾನ್‌ ಯೋಜನೆಗೆ ಕತ್ತರಿ?

ಆರ್ಟಿಕಲ್ 370 ರದ್ದತಿ ನಂತರ ಪುನರ್‌ ನಿರ್ಮಾಣಗೊಂಡ ಶಾರದಾ ಮಂದಿರವನ್ನು ಯುಗಾದಿಯಂದು ಲೋಕಾರ್ಪಣೆಗೊಳಿಸಲಾಗಿತ್ತು. ಆದಿ ಶಂಕರಾಚಾರ್ಯರು, ಸರ್ವಜ್ಞರ ಪೀಠ ಇಲ್ಲಿದೆ.

ಮಾರ್ಚ್ 18 ರಂದು ಕಾಶ್ಮೀರಿ ಪಂಡಿತರು ಶೃಂಗೇರಿಯಿಂದ ಪಂಚಲೋಹದ ಶಾರದಾಂಬೆ ವಿಗ್ರಹ ಕೊಂಡೊಯ್ದಿದ್ದರು. ಮಾರ್ಚ್‌ 22 ರಂದು‌ ತೀತ್ವಾಲ್‌ನಲ್ಲಿ ಕಾಶ್ಮೀರಿ ಪಂಡಿತರು ವಿಗ್ರಹವನ್ನು ಪ್ರತಿಷ್ಠಾಪಿಸಿದ್ದರು. ಪಂಚಲೋಹದ ವಿಗ್ರಹಕ್ಕೆ‌ ಇದೀಗ‌‌ ಶೃಂಗೇರಿ ಶ್ರೀಗಳು ಪೂಜೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಐದರ ಪೈಕಿ 3 ಗ್ಯಾರಂಟಿ ಆರಂಭದಲ್ಲಿ ಜಾರಿ – ಷರತ್ತುಗಳು ಏನಿರಬಹುದು?

Share This Article