ನಾಗಸಾಧು ಭೇಟಿ ಮಾಡಿ ಪ್ರಚಾರ ಆರಂಭ ಮಾಡಿದ ಶ್ರೀರಾಮುಲು

Public TV
1 Min Read

ಬಳ್ಳಾರಿ: ಬಿಜೆಪಿಯಿಂದ (BJP) ಟಿಕೆಟ್‌ ಘೋಷಣೆ ಬೆನ್ನಲ್ಲೇ ಶ್ರೀರಾಮುಲು (Sriramulu) ನಾಗಸಾಧುವನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಸಂಡೂರು ತಾಲೂಕಿನ ಜೋಗ ಗ್ರಾಮದಲ್ಲಿರುವ ದೇವರಕೊಳ್ಳ ಮಠದ ಜೋಗದ ದಿಗಂಬರ ರಾಜ ಭಾರತಿ ನಾಗಸಾಧು ಅವರನ್ನು ಶ್ರೀರಾಮುಲು ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ನಾನು ಮೋದಿ ಮುಖ ನೋಡಿ ಕೆಲಸ ಮಾಡಲ್ಲ: ಮಾಧುಸ್ವಾಮಿ

ಟಿಕೆಟ್‌ ಖಚಿತವಾದ ಬಳಿಕ ನಾಗ ಸಾಧು ಆಶೀರ್ವಾದ ಪಡೆದ ಶ್ರೀರಾಮುಲು ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಡಿಕೆಶಿ ಶಿವಕುಮಾರ್‌ ಸೇರಿದಂತೆ ಅನೇಕರು ಈ ನಾಗಸಾಧು ರನ್ನ ಪ್ರಮುಖ ಕೆಲಸ ಇದ್ದಾಗ ಆಗಲೆಂದು ಭೇಟಿ ಮಾಡಿ ಆಶ್ರೀವಾದ ಪಡೆಯುತ್ತಾರೆ. ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ಬಿಗ್ ಬಿ: ಆಂಜಿಯೋಪ್ಲ್ಯಾಸ್ಟಿಗೆ ಒಳಗಾದ ನಟ ಅಮಿತಾಭ್ ಬಚ್ಚನ್

Share This Article