ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ವಾರ್ಷಿಕ ಸಭೆ, ಬೆಂಗಳೂರಿನಲ್ಲಿ ನಡೆಸಿ: ಸೋಮಶೇಖರ್ ಮನವಿ

Public TV
1 Min Read

ನವದೆಹಲಿ: ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿಯ ಮುಂದಿನ ವಾರ್ಷಿಕ ಸಭೆಯನ್ನು ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಸುವಂತೆ ಕರ್ನಾಟಕದ ಸಹಕಾರ ಸಚಿವರು ಹಾಗೂ ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ನಿರ್ದೇಶಕರಾದ ಎಸ್.ಟಿ.ಸೋಮಶೇಖರ್, ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿಗೆ ಮನವಿ ಮಾಡಿದರು.

ನವದೆಹಲಿಯಲ್ಲಿ ಇಂದು ನಡೆದ ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ಅಧ್ಯಕ್ಷರಾದ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ವಸತಿ ಮಹಾಮಂಡಳಿ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇದನ್ನೂ ಓದಿ: ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಬೇಕು: ಸಿಜೆಐ ರಮಣ

ಮಹಾರಾಷ್ಟ್ರ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ, ಹರಿಯಾಣ ಸೇರಿದಂತೆ ಸಭೆಯಲ್ಲಿ 15ಕ್ಕೂ ಹೆಚ್ಚು ರಾಜ್ಯಗಳ ನಿರ್ದೇಶಕರು ಭಾಗವಹಿಸಿದ್ದರು. ರಾಷ್ಟ್ರೀಯ ವಸತಿ ನೀತಿ ಜಾರಿಗೊಳಿಸಲು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ನಿವೇಶನ ದೊರಕಿಸಿಕೊಡುವ ಬಗ್ಗೆ ಕೆಲವು ಅಡ್ಡಿ ಆತಂಕಗಳಿವೆ. ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಕೆಲವು ಅಡಚಣೆಗಳಿದ್ದು ಇವುಗಳನ್ನು ಪರಿಹರಿಸಲು ಕೇಂದ್ರ ಗೃಹ ಸಚಿವರು ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದನ್ನೂ ಓದಿ: ಬೀದರ್‌ಗೆ ಗುಲಾಬ್ ಚಂಡಮಾರುತದ ಎಫೆಕ್ಟ್- ಜಿಲ್ಲೆಯಲ್ಲಿ ಧಾರಾಕಾರ ಮಳೆ

ಈ ಸಭೆಯಲ್ಲಿ ಎಲ್ಲಾ ರಾಜ್ಯಗಳಲ್ಲಿ ಸಹಕಾರಿ ವಸತಿ ಮಹಾಮಂಡಳಿಗಳನ್ನು ಬಲಪಡಿಸಲು ಕೆಲವು ಮುಖ್ಯ ತಿದ್ದುಪಡಿ ತರುವ ಬಗ್ಗೆ ಚರ್ಚಿಸಲಾಯಿತು.

Share This Article
Leave a Comment

Leave a Reply

Your email address will not be published. Required fields are marked *