ಅಯೋಧ್ಯೆಯಲ್ಲಿ ತಾರಾ ದಂಡು: ಭಾಗಿಯಾದವರು ಯಾರೆಲ್ಲ?

Public TV
1 Min Read

ಇಂದು ಶ್ರೀರಾಮಲಲ್ಲಾ (Ramlalla) ಪ್ರಾಣಪ್ರತಿಷ್ಠಾಪನೆಗೆ ಕೆಲವೇ ಗಂಟೆ ಬಾಕಿ ಇದೆ. ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ (Ayodhya) ಭಾರತೀಯ ಸಿನಿಮಾ ರಂಗದ ಅನೇಕ ತಾರೆಯರು ಭಾಗಿಯಾಗಿದ್ದಾರೆ.

ಈಗಾಗಲೇ ಕನ್ನಡದ ಹೆಸರಾಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ(Rishabh Shetty), ಅನಿಲ್ ಕುಮಾರ ಸ್ವಾಮಿ, ಬಾಲಿವುಡ್ ಖ್ಯಾತ ನಟ ಅಮಿತಾಬ್‌ ಬಚ್ಚನ್‌, ತೆಲುಗು ನಟರಾದ ಚಿರಂಜೀವಿ, ರಾಮ್‌ಚರಣ್, ಪವನ್‌ ಕಲ್ಯಾಣ್‌ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ತ್‌, ಕತ್ರಿನಾ ಕೈಫ್‌ ಸೇರಿದಂತೆ ಅನೇಕ ನಟ ನಟಿಯರು ಅಯೋಧ್ಯೆಗೆ ಆಗಮಿಸಿದ್ದಾರೆ.

ಕೇವಲ ಸಿನಿಮಾ ನಟರು ಮಾತ್ರವಲ್ಲ, ಕ್ರೀಡಾ ತಾರೆ ಸಚಿನ್‌ ತೆಂಡೂಲ್ಕರ್‌, ವಿರಾಟ್‌ ಕೊಹ್ಲಿ, ವೆಂಕಟೇಶ್‌ ಪ್ರಸಾದ್‌, ಆರ್‌.ಅಶ್ವಿನ್‌, ಸೈನಾ ನೆಹ್ವಾಲ್‌ ಸೇರಿದಂತೆ ಅನೇಕರು ಅಯೋಧ್ಯೆಗೆ ಆಗಮಿಸಿದ್ದು, ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

 

ಅಯೋಧ್ಯೆಯಲ್ಲಿಂದು ಮೋದಿ:
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
ಬೆಳಗ್ಗೆ 10.55: ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್‌
ಬೆಳಗ್ಗೆ 11 ರಿಂದ ಮಧ್ಯಾಹ್ನ 12: ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55: ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2: ನರೇಂದ್ರ ಮೋದಿ, ಮೋಹನ್‌ ಭಾಗವತ್‌, ಯೋಗಿ ಆದಿತ್ಯನಾಥ್‌ ಸಾರ್ವಜನಿಕ ಭಾಷಣ
ಮಧ್ಯಾಹ್ನ 2.10: ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30: ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ

Share This Article