ಬಿಜೆಪಿ ಕುರುಬ ಸಮುದಾಯದ ನಾಯಕರ ಸಭೆ; ವಿಜಯೇಂದ್ರ‌ ಪರ ಬ್ಯಾಟಿಂಗ್ – ಈಶ್ವರಪ್ಪ ಘರ್ ವಾಪ್ಸಿ ಬಗ್ಗೆ ಚರ್ಚೆ

Public TV
1 Min Read

– ಸಮುದಾಯಕ್ಕೆ ಪಕ್ಷದಲ್ಲಿ ಪ್ರಾತಿನಿಧ್ಯತೆಗೆ ಆಗ್ರಹ

ಬೆಂಗಳೂರು: ಬಿಜೆಪಿಯಲ್ಲಿ (BJP) ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯತೆಗೆ ಒತ್ತಾಯಿಸಿ ಸಮುದಾಯದ ಮುಖಂಡರು ಮಹತ್ವದ ಸಭೆ ನಡೆಸಿದ್ದಾರೆ. ವಿಜಯೇಂದ್ರ  (B.Y Vijayendra) ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯಬೇಕೆಂದು ಒತ್ತಾಯಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಬೆಂಗಳೂರಿನ (Bengaluru) ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿರುವ ಸಮುದಾಯದ ಬಿಜೆಪಿ ನಾಯಕರು, ವಿಜಯೇಂದ್ರ ಪರ ಬ್ಯಾಟ್ ಬೀಸಿದ್ದಾರೆ. ಇದೇ ವೇಳೆ ಪಕ್ಷ ತೊರೆದ ಈಶ್ವರಪ್ಪ (K.S Eshwarappa) ಅವರನ್ನು ಮರಳಿ ತರುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ನಿರ್ಣಯ ಆಗಬೇಕು, ಕುರುಬ ಸಮುದಾಯದ ಮುಖಂಡರಿಗೆ ಪಕ್ಷದ ಪ್ರಮುಖ ಪದಾಧಿಕಾರಿ ಹುದ್ದೆ ಕೊಡಬೇಕು, ಮುಂಬರುವ ಜಿ.ಪಂ/ತಾ.ಪಂ ಚುನಾವಣೆಗಳಲ್ಲಿ ಸಮುದಾಯಕ್ಕೆ ಹೆಚ್ಚಿನ ಟಿಕೆಟ್ ಕೊಡಬೇಕು ಎಂದು ಒತ್ತಾಯಿಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

ಕುರುಬ ಸಮುದಾಯದ ಬಿಜೆಪಿ ನಾಯಕರಾದ ನಾಯಕರಾದ ಶಾಸಕ ಬೈರತಿ ಬಸವರಾಜು, ಶಾಸಕ ದೊಡ್ಡನಗೌಡ ಪಾಟೀಲ್, ರಘುನಾಥ್ ರಾವ್ ಮಲ್ಕಾಪೂರೆ, ವರ್ತೂರು ಪ್ರಕಾಶ್ ಸೇರಿದಂತೆ ಎಲ್ಲ ಜಿಲ್ಲೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಒಂದೆರೆಡು ತಿಂಗಳಲ್ಲಿ ಬೃಹತ್ ಕುರುಬ ಸಮುದಾಯದ ಸಮಾವೇಶ ಮಾಡಿ ಹೈಕಮಾಂಡ್ ನಾಯಕರಿಗೆ ಆಹ್ವಾನ ಕೊಡಬೇಕೆಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.

ಸಭೆಯಲ್ಲಿ ಬೈರತಿ ಬಸವರಾಜ್, ದೊಡ್ಡನಗೌಡ ಪಾಟೀಲ್, ವರ್ತೂರ್ ಪ್ರಕಾಶ್, ರಘುನಾಥ್ ಮಲ್ಕಾಪುರೆ, ಡಾ ಹುಲಿನಾಯಕರ್, ಶರಣು ತಳ್ಳಿಕೇರಿ, ಅಂಬಿಕಾ ಹುಲಿನಾಯಕರ್, ಸೋಮಶೇಖರ್, ಮಾ ನಾಗರಾಜ್, H.D ಪಾಟೀಲ್ ಭೋಜರಾಜ್ ಖರೂದಿ ಸೇರಿದಂತೆ ಎಲ್ಲಾ ಜಿಲ್ಲೆಗಳಿಂದ 8-10 ಪ್ರತಿನಿಧಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡುವುದಿಲ್ಲ: ಡಿಕೆಶಿ

Share This Article