ಮಂಗಳೂರು: ಜಿಲ್ಲೆಯ ಕುಡುಪುವಿನ ಮೈದಾನದಲ್ಲಿ ನಡೆದಿದ್ದ ಗುಂಪು ಹತ್ಯೆಯಲ್ಲಿ ಸಾವನ್ನಪ್ಪಿದ ಕೇರಳದ (Kerala) ವಯನಾಡ್ನ (Wayanad) ಅಶ್ರಫ್ ಕುಟುಂಬಸ್ಥರನ್ನು ರಾಜ್ಯ ಕಾಂಗ್ರೆಸ್ (Congress) ನಿಯೋಗ ಭೇಟಿಯಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದ ಕೆ.ಸಿ.ವೇಣುಗೋಪಾಲ್ ಕೋರಿಕೆಯಂತೆ, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಬೆಂಗಳೂರು ನಿವಾಸದಲ್ಲಿ ಸಚಿವ ಜಮೀರ್ ಅಹ್ಮದ್, ಎಐಸಿಸಿ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹ್ಮದ್, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಕಾಂಗ್ರೆಸ್ ಮುಖಂಡ ಜಿ.ಎ.ಬಾವಾ ಚರ್ಚೆ ನಡೆಸಿ, ಪರಿಹಾರ ವಿತರಿಸಿದ್ದಾರೆ.ಇದನ್ನೂ ಓದಿ: ಮಾಟ ಮಾಡ್ತಾರೆ ಅಂತ ಒಂದೇ ಕುಟುಂಬದ ಐವರನ್ನು ಜೀವಂತವಾಗಿ ಸುಟ್ಟು ಹತ್ಯೆ
ಚರ್ಚೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸಲು ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರನ್ನು ನೇಮಿಸಲು ತೀರ್ಮಾನಿಸಲಾಗಿದೆ. ಅದೇ ರೀತಿ ಗುಂಪು ಹತ್ಯಾ ಕಾಯ್ದೆ ಪ್ರಕಾರ ಹತ್ಯೆಯಾದ ಅಶ್ರಫ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರ ಒದಗಿಸುವ ಕುರಿತು ಚರ್ಚೆ ನಡೆಸಲಾಗಿದೆ.
Attended the meeting with the Mangalore delegation at Govt Residence of Hon’ble Karnataka Legislative Assembly Speaker Speaker U. T. Khader in Bengaluru City
Senior leader Shri.BK Hariprasad, CM Political Secretary Janab Naseer Ahmed, Congress Leader Janab GA Bawa were present. pic.twitter.com/CBlxd6SJD6
— B Z Zameer Ahmed Khan (@BZZameerAhmedK) July 7, 2025
ಇನ್ನೂ ತಮ್ಮ ವೈಯುಕ್ತಿಕ ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ 10 ಲಕ್ಷ ರೂ. ಹಾಗೂ ಯು.ಟಿ.ಖಾದರ್ 5 ಲಕ್ಷ ರೂ. ಪರಿಹಾರದ ಮೊತ್ತವನ್ನು ಅಶ್ರಫ್ ಕುಟುಂಬಸ್ಥರಿಗೆ ವಿತರಿಸಿದರು.ಇದನ್ನೂ ಓದಿ: ಪಾಕ್ ಬೇಹುಗಾರ್ತಿಗೆ ಕೇರಳ ಸರ್ಕಾರ ಧನಸಹಾಯ – ಸರ್ಕಾರದ ಖರ್ಚಿನಲ್ಲಿ ವ್ಲಾಗರ್ ಜ್ಯೋತಿ ಪ್ರವಾಸ