ಬೀದರ್: ರಾಜ್ಯ ಮಟ್ಟದ ಜನಪರ ಉತ್ಸವಕ್ಕೆ ಅದ್ಧೂರಿ ಚಾಲನೆ

Public TV
1 Min Read

ಬೀದರ್: ನಗರದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜನಪರ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಇಂದು ಅಧಿಕೃತವಾಗಿ ಹಲಗೆ ಬಾರಿಸುವ ಮೂಲಕ ಚಾಲನೆ ನೀಡಿದರು.

ಎರಡು ದಿನಗಳ ಕಾಲ ಈ ಉತ್ಸವ ನಡೆಯಲಿದ್ದು ಪ್ರತಿ ಜಿಲ್ಲೆಗಳಿಂದ ಹಾಗೂ ಸ್ಥಳೀಯ ಕಲಾವಿದ್ರು ಬಂದು ತಮ್ಮ ಕಲೆಯನ್ನು ಅನಾವರಣ ಮಾಡಲಿದ್ದಾರೆ. ನಗರದ ಅಂಬೇಡ್ಕರ್ ವೃತದಲ್ಲಿ ಉತ್ಸವಕ್ಕೆ ಚಾಲನೆ ನೀಡಲಾಗಿದ್ದು ವಿವಿಧ ಕಲಾತಂಡಗಳ ಬೃಹತ್ ಮೆರವಣೆಗೆ ಮೂಲಕ ನೆಹರು ಕ್ರಿಡಾಂಗಣಕ್ಕೆ ಬಂದು ತಲುಪಿದೆ.

ಶ್ರೀ ವಿಜಯಕುಮಾರ್ ಸೋನಾರೆ ಅವರ ನೇತೃತ್ವದಲ್ಲಿ ಫೆ.20 ರಿಂದ ಬೀದರ್ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಜ್ಯೋತಿಯಾತ್ರೆ ಮಾಡಿದ್ದು, ಇಂದು ವೇದಿಕೆಗೆ ಜ್ಯೋತಿ ಬಂದು ತಲುಪಿದೆ. ಮೊದಲ ಬಾರಿಗೆ ಗಡಿ ಜಿಲ್ಲೆ ಬೀದರ್‍ನಲ್ಲಿ ಈ ಉತ್ಸವ ನಡೆಯುತ್ತಿದ್ದು ಕವಿಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕಗಳು ಸೇರಿದಂತೆ ಹಲವು ವೈವಿದ್ಯಮಯ ಕಾರ್ಯಕ್ರಮಗಳು ನಡೆಯಲಿವೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಉಮಾಶ್ರೀಯಿಂದ ಉದ್ಘಾಟನಾ ಕಾರ್ಯಕ್ರಮ ನೆರವೇರಿದೆ. ವಿವಿಧ ಪಕ್ಷಗಳ ರಾಜಕೀಯ ನಾಯಕರು ಮತ್ತು ಕಲಾವಿದ್ರು ಈ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *