ರಾಜ್ಯದ ಹವಾಮಾನ ವರದಿ 19-05-2025

Public TV
1 Min Read

ರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮೇ 22ರವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಗಂಟೆಗೆ ಗಾಳಿ 40ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ, ಚಿತ್ರದುರ್ಗ ಮುಂತಾದ ಸ್ಥಳಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-22
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 29-22
ಮೈಸೂರು: 27-22

ಮಂಡ್ಯ: 31-22
ಮಡಿಕೇರಿ: 27-21
ರಾಮನಗರ: 28-22
ಹಾಸನ: 27-20
ಚಾಮರಾಜನಗರ: 27-22
ಚಿಕ್ಕಬಳ್ಳಾಪುರ: 27-22

ಕೋಲಾರ: 27-22
ತುಮಕೂರು: 28-22
ಉಡುಪಿ: 30-24
ಕಾರವಾರ: 33-27
ಚಿಕ್ಕಮಗಳೂರು: 26-20
ದಾವಣಗೆರೆ: 28-23

ಹುಬ್ಬಳ್ಳಿ: 31-23
ಚಿತ್ರದುರ್ಗ: 28-22
ಹಾವೇರಿ: 32-24
ಬಳ್ಳಾರಿ: 31-24
ಗದಗ: 31-23
ಕೊಪ್ಪಳ: 32-23

ರಾಯಚೂರು: 34-25
ಯಾದಗಿರಿ: 34-25
ವಿಜಯಪುರ: 32-24
ಬೀದರ್: 33-24
ಕಲಬುರಗಿ: 36-24
ಬಾಗಲಕೋಟೆ: 33-24

Share This Article