ಉದ್ಘಾಟನೆಗೆ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆತ – ಮೂವರ ಬಂಧನ

Public TV
1 Min Read

ಅಮರಾವತಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ಚಾಲನೆ ನೀಡಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ (Vande Bharat Express Train) ಕಲ್ಲು ಹೊಡೆದು (Stone Pelting) ಕಿಟಕಿ ಗಾಜುಗಳನ್ನು ಒಡೆದಿರುವ ಘಟನೆ ವರದಿಯಾಗಿತ್ತು. ರೈಲಿಗೆ ಹಾನಿ ಮಾಡಿರುವ ಆರೋಪದ ಮೇಲೆ ವಿಶಾಖಪಟ್ಟಣಂನ (Visakhapatnam) ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬುಧವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಇನ್ನೂ ಚಾಲನೆ ಸಿಗದ ಹೊಸ ಹೈಸ್ಪೀಡ್ ರೈಲಿನ ಕೋಚ್ ಒಂದರ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿಗಳನ್ನು ಒಡೆದಿದ್ದಾರೆ. ಗುರುವಾರ ಪೊಲೀಸರು ಪ್ರಕರಣದ ಬಗ್ಗೆ ತೀವ್ರ ತನಿಖೆ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ವರದಿಗಳ ಪ್ರಕಾರ ಕಂಚಾರ್ಲಪಾಲೆಂನ ಕೋಚ್ ಕಾಂಪ್ಲೆಕ್ಸ್ ಬಳಿ ಕಲ್ಲು ತೂರಾಟ ಪ್ರಕರಣ ನಡೆದಿದೆ. ರೈಲಿನ ಒಂದು ಕಿಟಕಿಯ ಗಾಜನ್ನು ಸಂಪೂರ್ಣ ಒಡೆದಿದ್ದು, ಮತ್ತೊಂದರಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದನ್ನೂ ಓದಿ: ರನ್‌ವೇ ಸಿದ್ದವಾಗಿದೆ, ಕೌಶಲ್ಯಗಳನ್ನು ಕಲಿತು ಟೇಕಾಫ್‌ ಆಗಿ – ಯುವ ಜನತೆಗೆ ಮೋದಿ ಕರೆ

ಆರೋಪಿಗಳ ವಿರುದ್ಧ ರೈಲ್ವೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಕರಣವನ್ನು ನಿರ್ವಹಿಸಿದೆ ಎಂದು ಪೊಲೀಸ್ ಆಯುಕ್ತ ಶ್ರೀಕಾಂತ್ ತಿಳಿಸಿದ್ದಾರೆ.

ನಿರ್ವಹಣೆ ತಪಾಸಣೆ ಮತ್ತು ಪ್ರಾಯೋಗಿಕ ಓಡಾಟಕ್ಕಾಗಿ ವಂದೇ ಭಾರತ್ ರೈಲನ್ನು ಬುಧವಾರ ಚೆನ್ನೈನಿಂದ ವಿಶಾಖಪಟ್ಟಣಂಗೆ ತರಿಸಲಾಗಿತ್ತು. ಈ ದುಷ್ಕೃತ್ಯದ ಹಿನ್ನೆಲೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನ 8ನೇ ರೈಲಿಗೆ ಜನವರಿ 19 ರಂದು ಹೈದರಾಬಾದ್‌ನಲ್ಲಿ ಪ್ರಧಾನ ಮಂತ್ರಿ ಅವರು ಚಾಲನೆ ನೀಡಲು ನಿರ್ಧರಿಸಿದ್ದರು. ಆದರೆ ಈ ಭೇಟಿಯನ್ನು ಮುಂದೂಡಲಾಗಿದ್ದು, ಜನವರಿ 15 ಮಕರ ಸಂಕ್ರಾಂತಿಯಂದು ವರ್ಚುವಲ್ ಆಗಿ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ – ಬ್ಯಾರಿಕೇಡ್ ಹಾರಿ ಕಾರಿನತ್ತ ನುಗ್ಗಿದ ಯುವಕ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *