ಮೋದಿ ಸಮಾವೇಶಕ್ಕೆ ಬಂದ ಕಾರ್ಯಕರ್ತರ ಬಸ್ಸಿನ ಮೇಲೆ ಕಲ್ಲುತೂರಾಟ

Public TV
1 Min Read

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರು ತೆರಳುತ್ತಿದ್ದ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆದಿದೆ.

ಮಂಗಳೂರು ಹೊರವಲಯದ ಕುತ್ತಾರು ಬಳಿ ಘಟನೆ ನಡೆದಿದ್ದು, ಎರಡು ಬಸ್ ಗಳಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ಪರಿಣಾಮ ಬಸ್ಸಿನಲ್ಲಿದ್ದ ನಾಲ್ಕು ಮಂದಿ ಕಾರ್ಯಕರ್ತರ ತಲೆಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕತ್ಸೆ ನೀಡಲಾಗಿದೆ. ಇದನ್ನು ಓದಿ: ವಂಶೋದಯ ಅಲ್ಲ ನಮ್ಮದು ಅಂತ್ಯೋದಯ್ – ನಿಮ್ಮ ಒಂದು ವೋಟಿನಿಂದ ದೇಶ ಬದಲಾಗಿದೆ: ಮೋದಿ

ಮಂಗಳೂರಿನ ಕೇಂದ್ರ ನೆಹರೂ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್, ಜೆಡಿಎಸ್ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದ್ದರು. 5 ವರ್ಷದ ಅವಧಿಯಲ್ಲಿ ಸರ್ಕಾರದ ಸಾಧನೆಗಳ ಪಟ್ಟಿಯನ್ನು ಜನರ ಮುಂದೆ ತೆರೆದಿಟ್ಟಿದ್ದರು. ಸಮಾವೇಶದಲ್ಲಿ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಬಿಜೆಪಿ ಲೋಕಸಭಾ ಅಭ್ಯರ್ಥಿಗಳು ಸೇರಿದಂತೆ ಬಿಜೆಪಿ ಶಾಸಕರು, 80 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *