ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಎರಡು ದಿನದ ಹಿಂದೆ ಹಾಡಿ ಹೊಗಳಿದ ʼಶಾಂತಿದೂತರುʼ ಮಂಡ್ಯದ ಮದ್ದೂರಿನಲ್ಲಿ (Madduru) ಗಣಪತಿ ಮೆರವಣಿಗೆಯ (Ganesh Procession) ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪರಿಷತ್ ಸದಸ್ಯ ಸಿಟಿ ರವಿ (CT Ravi) ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಿದ್ದರಾಮಯ್ಯನವರನ್ನು (Siddaramaiah) ತರಾಟೆಗೆ ತೆಗೆದುಕೊಂಡಿದ್ದಾರೆ.
ಪೋಸ್ಟ್ನಲ್ಲಿ ಏನಿದೆ?
ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹಾಡಿ ಹೊಗಳಿದ “ಶಾಂತಿದೂತರು” ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಸಾಗರದಲ್ಲಿ ಗಣಪತಿಯ ವಿಗ್ರಹಕ್ಕೆ ಉಗುಳುವ ಹೀನ ಕೆಲಸ ಮಾಡಿದ್ದಾರೆ. ಜಾಗತಿಕ ಭಯೋತ್ಪಾದನೆಗೆ ದೊಡ್ಡ ಕೊಡುಗೆ ಕೊಟ್ಟವರು, ನೀವು ಹೊಗಳಿದ ಶಾಂತಿದೂತರೆ.
ಭರತಖಂಡದಲ್ಲಿ ಹಿಂದೂಗಳ ಮಾರಣಹೋಮಕ್ಕೆ ಕಾರಣರಾದವರು ನೀವು ಹೊಗಳಿದ ಶಾಂತಿದೂತರೆ. ಭಾರತವನ್ನು ವಿಭಜಿಸುವ ಮೂಲಕ ಅಖಂಡ ಭಾರತವನ್ನು ತುಂಡರಿಸಿದವರು ನೀವು ಹೊಗಳಿದ ಶಾಂತಿದೂತರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಕಲ್ಲು – ನಾಳೆ ಬೆಳಗ್ಗೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ
ಕಾಶ್ಮೀರದಲ್ಲಿ ಭಾರತದ ರಾಷ್ಟ್ರೀಯ ಲಾಂಛನ ʼಅಶೋಕಚಕ್ರʼವನ್ನು ಒಡೆದು ಹಾಕಿದವರು ನೀವು ಹೊಗಳಿದ ಶಾಂತಿದೂತರೆ. ನೆನಪಿಡಿ ಈ ನಿಮ್ಮ ಶಾಂತಿದೂತರನ್ನು ನಂಬಿಕೊಂಡಿದ್ದರೆ ಮುಂದೊಂದು ದಿನ ದೇಶದಲ್ಲಿ ʼಸಂವಿಧಾನʼದ ಬದಲಿಗೆ ʼಷರಿಯಾʼಆವರಿಸಿಕೊಂಡಿತು. ರಾಷ್ಟ್ರಧ್ವಜ ಮತ್ತು ರಾಷ್ಟ್ರಲಾಂಛನವನ್ನು ಗೌರವಿಸಲಾರದವರು ಸಂವಿಧಾನವನ್ನು ಉಳಿಸಿಯಾರೆ? ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ – ಮದ್ದೂರು ಉದ್ವಿಗ್ನ
ಇನ್ನೆಷ್ಟು ದಿನ ಮತಗಳಿಕೆಗಾಗಿ ಸುಳ್ಳಿನ ಭರಾಟೆ? ಸತ್ಯ ಹೇಳಿ ಜನಜಾಗೃತಿ ಮೂಡಿಸಿ. ಆಗಲಾದರೂ ಜನರಿಗೆ ಶಾಂತಿದೂತರ ಹೀನಕೃತ್ಯ ಅರ್ಥವಾದೀತು. ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾದರೂ ಆದೀತು.