ಕೊಪ್ಪಳದಲ್ಲಿ ಕೆಎಸ್‍ಆರ್‌ಟಿಸಿ ಬಸ್‍ಗೆ ಕಲ್ಲು ತೂರಾಟ

Public TV
0 Min Read

ಕೊಪ್ಪಳ: ಕೆಎಸ್‍ಆರ್‌ಟಿಸಿ ಬಸ್‍ಗೆ (KSRTC Bus) ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದು ಕುಕನೂರ ತಾಲೂಕಿನ ಮಸಬಹಂಚಿನಾಳದಲ್ಲಿ ನಡೆದಿದೆ.

ಬಸ್ ತಡರಾತ್ರಿ ಯಲಬುರ್ಗಾದಿಂದ ಬೆಂಗಳೂರಿಗೆ (Bengaluru) ಹೊರಟಿತ್ತು. ಬಸ್ ಮಸಬಹಂಚಿನಾಳ ಬಳಿ ತಲುಪಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಬಸ್‍ನ ಗಾಜು ಪುಡಿಪುಡಿಯಾಗಿದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದ ಸಾರಿಗೆ ನೌಕರರು – ಇಂದಿನಿಂದ ಬಸ್‌ ಬಂದ್‌

ಕಲ್ಲು ತೂರಾಟದ ಬಳಿಕ ಬಸ್‍ನ್ನು ಚಾಲಕ ವಾಪಸ್ ಡಿಪೋಗೆ ಕೊಂಡೊಯ್ದಿದ್ದಾರೆ. ಇದರಿಂದ ಪ್ರಯಾಣಿಕರು ರಾತ್ರಿ ವೇಳೆ ಪರದಾಡುವಂತಾಯಿತು. ಇದನ್ನೂ ಓದಿ: ಸಾರಿಗೆ ಮುಷ್ಕರ ನಿಲ್ಲಿಸಲು KSRTC, BMTC ಕೊನೆಯ ಕಸರತ್ತು

Share This Article