ಮಾತಿನ ಸಮರ ನಿಲ್ಲಿಸಿ: ಮೈಸೂರಿನ ಜನ ಪ್ರತಿನಿಧಿಗಳಿಗೆ ಕಟೀಲ್‌ ಎಚ್ಚರಿಕೆ

Public TV
1 Min Read

ಬೆಂಗಳೂರು: ಮೈಸೂರು ಇಬ್ಬರು ಶಾಸಕರು ಮತ್ತು ಸಂಸದರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕರೆ ಮಾಡಿ ಮಾತಿನ ವಾಕ್ಸಮರ ನಿಲ್ಲಿಸುವಂತೆ ತಾಕೀತು ಮಾಡಿದ್ದಾರೆ.

ಹಾದಿ ಬೀದಿ ರಂಪಾಟದಿಂದ ಪಕ್ಷಕ್ಕೆ ಮುಜುಗರವಾಗುತ್ತಿರುವ ಹಿನ್ನೆಲೆಯಲ್ಲಿ ರಾಮದಾಸ್‌, ಎಲ್‌.ನಾಗೇಂದ್ರ ಮತ್ತು ಸಂಸದ ಪ್ರತಾಪ್‌ ಸಿಂಹ ಅವರಿಗೆ ಕಟೀಲ್‌ ಕರೆ ಮಾಡಿ ವಿವರಣೆ ಕೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಭಾರತ ವಿರೋಧಿ ಸ್ನೇಹಿತರು ಟ್ರುಡೊರನ್ನು ರಕ್ಷಿಸಬಹುದು: ಇದು ಕರ್ಮ ಎಂದ ಸಿಂಘ್ವಿ



ಗ್ಯಾಸ್‌ ಪೈಪ್‌ಲೈನ್‌ ಯೋಜನೆ ಕೇಂದ್ರ ಸರ್ಕಾರದ್ದು. ನಾಯಕರಾದ ನೀವೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಪಕ್ಷದ ನಿಯಮ ಉಲ್ಲಂಘನೆ ಆಗುತ್ತದೆ. ಕೂಡಲೇ ಮಾತಿನ ಸಮರ ನಿಲ್ಲಿಸಬೇಕು. ಇಲ್ಲದಿದ್ದರೆ ಹೈಕಮಾಂಡ್‌ಗೆ ವರದಿ ಸಲ್ಲಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಫೆಬ್ರವರಿಯಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ

Share This Article
Leave a Comment

Leave a Reply

Your email address will not be published. Required fields are marked *