ಬೆಂಗಳೂರಲ್ಲೂ ಚಳಿ ಹೆಚ್ಚಳ- ಸಿಲಿಕಾನ್ ಸಿಟಿ ಜನ ಫುಲ್ ಥಂಡಾ

Public TV
2 Min Read

ಬೆಂಗಳೂರು: ಚಳಿ (Winter) ಅಬ್ಬರಕ್ಕೆ ಉತ್ತರ ಭಾರತ ಅಕ್ಷರಶಃ ತತ್ತರಿಸುತ್ತಿದೆ. ಈ ಭಾಗದಲ್ಲಿ ಅನೇಕ ಸಾವು-ನೋವುಗಳು ಕೂಡ ಸಂಭವಿಸಿವೆ. ಈ ನಡುವೆ ಬೆಂಗಳೂರಿಗೂ ಕೊರೆವ ಚಳಿಯ ಎಫೆಕ್ಟ್ ತಟ್ಟಿದ್ದು, ಸಿಲಿಕಾನ್ ಸಿಟಿ (Bengaluru) ಜನ ಥಂಡಾ ಹೊಡೆಯುವ ಪರಿಸ್ಥಿತಿ ನಿರ್ಮಾಣ ಆಗಿದೆ.

ಈ ಬಾರಿ ದೇಶದಲ್ಲಿ ಚಳಿಯ ಆರ್ಭಟ ವಾಡಿಕೆಗಿಂತಲೂ ಕೊಂಚ ಜೋರಾಗಿಯೇ ಇದೆ. ಉತ್ತರ ಭಾರತದಲ್ಲಿ ಚಳಿಯ ಅಬ್ಬರಕ್ಕೆ ಅನೇಕರು ಪ್ರಾಣ ತೆತ್ತಿದ್ದಾರೆ. ಈ ನಡುವೆ ರಾಜ್ಯದಲ್ಲೂ ಚಳಿ ಕಾಟ ಕಳೆದ ಕೆಲ ದಿನಗಳಿಂದ ಹೆಚ್ಚಾಗಿದ್ದು, ಬಹುತೇಕ ಕಡೆ ಕನಿಷ್ಠ ಉಷ್ಣಾಂಶ ಕೂಡ ಗಮನಾರ್ಹವಾಗಿ ಇಳಿಕೆ ಕಂಡಿದೆ. ಇದನ್ನೂ ಓದಿ: ಪ್ರತಿ ತಿಂಗಳು 6 ಸಾವಿರ ಪಿಂಚಣಿ ಕೊಡಿ – ಸರ್ಕಾರಕ್ಕೆ ಬೋಳುತಲೆ ಪುರುಷರ ಸಂಘ ಮನವಿ

ಸಿಲಿಕಾನ್ ಸಿಟಿಯಲ್ಲೂ ಕೂಡ ಈ ಬಾರಿ ಚಳಿಯ ಎಫೆಕ್ಟ್ ಬೆಳ್ಳಂಬೆಳಗ್ಗೆ ಜನ ಆಚೆ ಬರಲು ಯೋಚನೆ ಮಾಡುವಂತ ಪರಿಸ್ಥಿತಿ ನಿರ್ಮಾಣ ಆಗಿದೆ. ಕಳೆದ ಕೆಲ ದಿನಗಳಿಂದ ನಗರದಲ್ಲಿ ಚಳಿ ಜಾಸ್ತಿಯಾಗಿದ್ದು, ವಾಡಿಕೆಗಿಂತಲೂ ಹೆಚ್ಚಿನ ಚಳಿ ಜನರನ್ನ ಹೈರಾಣಾಗಿಸಿದೆ. ಬೆಳ್ಳಂಬೆಳಗ್ಗೆ ಚಳಿ ಜೊತೆ ಮಂಜು ಕೂಡ ದಟ್ಟವಾಗುತ್ತಿದ್ದು, ಕೆಲವೊಮ್ಮೆ ಸಂಜೆ ವೇಳೆಯೂ ಮಂಜಿನ ಎಫೆಕ್ಟ್ ಜನರಿಗೆ ಜೋರಾಗಿಯೇ ತಟ್ಟುತ್ತಿದೆ. ಇನ್ನೂ ವಾಡಿಕೆಯಂತೆ ಜನವರಿ ತಿಂಗಳಲ್ಲಿ ಬೆಂಗಳೂರಿನ ಕನಿಷ್ಠ ತಾಪಮಾನ 16 ರಿಂದ 17 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗುತ್ತಿತ್ತು. ಆದರೆ ಈ ಬಾರಿ 14 ಡಿಗ್ರಿಗೆ ಕುಸಿತ ಕಂಡಿದೆ. ಇನ್ನೂ ಹೆಚ್‍ಎಎಲ್ ವಿಮಾನ ನಿಲ್ದಾಣದಲ್ಲಿ 13 ಡಿಗ್ರಿ ಇದ್ರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 12.4 ಡಿಗ್ರಿಗೆ ಕುಸಿತ ಕಂಡಿದೆ.

ಕೇವಲ ಬೆಂಗಳೂರು ಮಾತ್ರವಲ್ಲ ಉತ್ತರ ಕರ್ನಾಟಕದ ಅನೇಕ ಕಡೆಯೂ ಚಳಿಯ ಆರ್ಭಟ ಜೋರಾಗಿದೆ. ಬೀದರ್, ವಿಜಯಪುರ, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ಗದಗ ಮತ್ತು ಹಂಪಿ, ಬೀದರ್, ವಿಜಯಪುರ, ರಾಯಚೂರಿನಲ್ಲೂ ಕನಿಷ್ಠ ಉಷ್ಣಾಂಶ ಕಡಿಮೆಯಾಗಿದ್ದು, 9 ಡಿಗ್ರಿ ಆಸುಪಾಸಿನಲ್ಲಿ ಕನಿಷ್ಠ ತಾಪಮಾನ ದಾಖಲಾಗುತ್ತಿದೆ.

ಒಟ್ಟಾರೆ ಮುಂದಿನ ಕೆಲದಿನಗಳು ಇದೇ ರೀತಿ ಪರಿಸ್ಥಿತಿ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸ್ವಲ್ಪ ಎಚ್ಚರಿಕೆ ವಹಿಸಿದ್ರೆ ಸೂಕ್ತ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *