ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದಾಗ ಸ್ಟ್ರೀಟ್‍ಲೈಟ್ ಕಂಬ ಬಿದ್ದು ಬಾಲಕಿ ಸಾವು!

Public TV
1 Min Read

ಆನೇಕಲ್: ಪುಟ್‍ಪಾತ್ ಮೇಲಿದ್ದ ಸ್ಟ್ರೀಟ್ ಲೈಟ್ ಕಂಬ ಬಿದ್ದು ಬಾಲಕಿ ಸಾವನ್ನಪಿರುವ ಘಟನೆ ಬೆಂಗಳೂರಿನ ಕಾಡುಗುಡಿ-ಓ ಫಾರಂ ಮಧ್ಯಭಾಗದ ದಿನ್ನೂರು ಕ್ರಾಸ್ ಬಳಿ ಸಂಭವಿಸಿದೆ.

ವರ್ತೂರು ಗ್ರಾಮದ ನಿವಾಸಿಯಾದ ಯುವರಾಣಿ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, 7ನೇ ತರಗತಿ ಓದುತ್ತಿದ್ದಳು. ತನ್ನ ತಂದೆ ಹರೀಶ್ ಜೊತೆ ದ್ವಿಚಕ್ರವಾಹನದಲ್ಲಿ ಹೊಸಕೋಟೆಯಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ಹೋಗಿ ಬರುವ ವೇಳೆ ಈ ಘಟನೆ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಹತ್ತಿರದ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ತಮ್ಮ ಬಾಲಕಿ ಸಾವಿಗೆ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ.

ಈ ಘಟನೆ ಕುರಿತು ಕಾಡುಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *