ಚೆನ್ನಾಗಿ ಓದು ಎಂದು ವಿದ್ಯಾರ್ಥಿನಿ ಬೆನ್ನು ತಟ್ಟಿದ್ದಕ್ಕೆ ಬಿಇಒಗೆ ಥಳಿತ

Public TV
1 Min Read

ಗದಗ: ಚೆನ್ನಾಗಿ ಓದು ಎಂದು ಬೆನ್ನುತಟ್ಟಿ ಪ್ರೋತ್ಸಾಹಿಸಿ ಹೆಗಲ ಮೇಲೆ ಕೈಹಾಕಿದ ಬಿಇಓ ಅಧಿಕಾರಿಯನ್ನು ಪಾಲಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.

ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರ್ ಎನ್. ಹಳ್ಳಿಗುಡಿಯವರ ಮನೆಗೆ ನುಗ್ಗಿ 6 ಜನ ಪಾಲಕರ ಗುಂಪೊಂದು ಮನಬಂದಂತೆ ಹಲ್ಲೆ ಮಾಡಿದೆ. ಮನೆ-ಮನೆಗೆ ಭೇಟಿ ಕಾರ್ಯಕ್ರಮದ ಅಂಗವಾಗಿ ಕ್ಷೇತ್ರದ ಹಳ್ಳಿಕೇರಿ ಗ್ರಾಮಕ್ಕೆ ಶಂಕರ್ ಭೇಟಿ ನೀಡಿದ್ದಾರೆ. ಆಗ ರಾತ್ರಿ ವೇಳೆ ಗ್ರಾಮದ ವಿದ್ಯಾರ್ಥಿನಿ ಮನೆಗೆ ಹೋಗಿದ್ದಾರೆ. ಮನೆಯಲ್ಲಿ ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ ಚೆನ್ನಾಗಿ ಓದು ಎಂದು ಬೆನ್ನುತಟ್ಟಿ ಪ್ರೋತ್ಸಾಹಿಸಿ ಹೆಗಲ ಮೇಲೆ ಕೈಹಾಕಿದ್ದಾರೆ.

ಇದನ್ನೇ ಅಪಾರ್ಥ ತಿಳಿದ ಪಾಲಕರು, ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ 6 ಜನ ಪಾಲಕರ ತಂಡ ಮುಂಡರಗಿ ಪಟ್ಟಣದ ಅವರ ಮನೆಗೆ ನುಗ್ಗಿ ಮನಬಂದಂತೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿರುವ ಕೇತ್ರ ಶಿಕ್ಷಣಾಧಿಕಾರಿ ಶಂಕರ್ ಹಳ್ಳಿಗುಡಿ ಅವರನ್ನು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಕುರಿತು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *