ಪರೀಕ್ಷೆ ಸರಿಯಾಗಿ ಬರೆದಿಲ್ಲ ಅಂತಾ ನೇಣಿಗೆ ಶರಣಾದ ವಿದ್ಯಾರ್ಥಿನಿ

Public TV
1 Min Read

ಚಿಕ್ಕಬಳ್ಳಾಪುರ: ಪರೀಕ್ಷೆಯಲ್ಲಿ ಉತ್ತಮವಾಗಿ ಬರೆದಿಲ್ಲ ಎಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಬಾಗೇಪಲ್ಲಿಯ ಪಟ್ಟಣದ 16 ನೇ ವಾರ್ಡ್ ನಲ್ಲಿ ನಡೆದಿದೆ.

21 ವರ್ಷದ ತನುಜಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ತನುಜಾ ಬಾಗೇಪಲ್ಲಿ ಪಟ್ಟಣದ ನ್ಯಾಷನಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಶುಕ್ರವಾರ ರಸಾಯನ ಶಾಸ್ತ್ರದ ಪರೀಕ್ಷೆ ಬರೆದು ಬಂದ ತನುಜಾ ಚೆನ್ನಾಗಿ ಬರೆದಿಲ್ಲ ಅಂತಾ ಕುಟುಂಬಸ್ಥರ ಮುಂದೆ ಹೇಳಿಕೊಂಡಿದ್ರು. ಮನೆಯ ಸದಸ್ಯರು ಪರವಾಗಿಲ್ಲ ಏನಾಗಲ್ಲ ಅಂತಾ ಸಮಾಧಾನಪಡಿಸಿದ್ರು. ನಂತರ ಕೋಣೆ ಸೇರಿಕೊಂಡ ತನುಜಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಂತಿಮ ವರ್ಷದ ಪರೀಕ್ಷೆ ಸರಿಯಾಗಿ ಎದುರಿಸಲಿಲ್ಲ. ಹೀಗಾಗಿ ತಾನು ಅನುತ್ತೀರ್ಣಗೊಳ್ಳುತ್ತೇನೆ ಎಂಬ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *