ಕಾಲೇಜ್‍ಗೆ ಹೋಗು ಎಂದ ಪೋಷಕರು-ಬಾರದ ಲೋಕಕ್ಕೆ ಹೋದ ಮಗಳು

Public TV
1 Min Read

ಮಡಿಕೇರಿ: ದ್ವಿತೀಯ ಪಿಯು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅರ್ವತೋಕ್ಲು-ಮೈಸೂರಮ್ಮ ನಗರದಲ್ಲಿ ನಡೆದಿದೆ.

18 ವರ್ಷದ ದರ್ಶಿನಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದರ್ಶಿನಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡ್ತಿದ್ದಳು. ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಿಲ್ಲೆಂದು ಬರೆಯಲಾಗಿದೆ. ದರ್ಶಿನಿ ಪೋಷಕರ ಒತ್ತಾಯದ ಮೇರೆಗೆ ಕಾಲೇಜಿಗೆ ಹೋಗುತ್ತಿದ್ದಳು. ಶಿಕ್ಷಣಕ್ಕೆ ಪೂರ್ಣ ವಿರಾಮ ಹಾಕಲು ನಿರ್ಧರಿಸಿದ್ದ ದರ್ಶಿನಿಯ ತೀರ್ಮಾನವನ್ನು ಪೋಷಕರು ವಿರೋಧಿಸಿದ್ದರು ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ದರ್ಶಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *