ಶಾಲಾ ಆವರಣದಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು

Public TV
1 Min Read

ರಾಯಚೂರು: ಲಿಂಗಸುಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ.

ಕಿಲ್ಲಾರಹಟ್ಟಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನ್(13) ಮೃತ ಬಾಲಕ. ಶಾಲಾ ಆವರಣದಲ್ಲಿ ಮಲ್ಲಿಕಾರ್ಜುನ್ ಕ್ರಿಕೆಟ್ ಆಡುವಾಗ ಚೆಂಡು ತರಲು ಹೋಗಿದ್ದ. ಈ ವೇಳೆ ನಿರ್ಮಾಣ ಹಂತದಲ್ಲಿರುವ ಬಿಸಿಯೂಟದ ಕೋಣೆಯ ಮೇಲಿನ ವಿದ್ಯುತ್ ತಂತಿ ಮಲ್ಲಿಕಾರ್ಜುನ್‍ಗೆ ತಗುಲಿದೆ. ಪರಿಣಾಮ ಮಲ್ಲಿಕಾರ್ಜುನ್ ಅಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಪೀಣ್ಯ ಫ್ಲೈಓವರ್ ಮೇಲೆ ಸರಣಿ ಅಪಘಾತ – ಟ್ರಾಫಿಕ್ ಜಾಮ್ 

crime

ಘಟನೆ ಹಿನ್ನೆಲೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಸಾವಿನಿಂದ ಉಳಿದ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೊಳಗಾಗಿದ್ದಾರೆ. ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *