ವೈದ್ಯರ ಮುಷ್ಕರಕ್ಕೆ ದ.ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ- ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವಿದ್ಯಾರ್ಥಿನಿ ಸಾವು

Public TV
0 Min Read

ಮಂಗಳೂರು: ಕಳೆದ ನಾಲ್ಕು ದಿನಗಳಿಂದ ರಾಜ್ಯಾದ್ಯಂತ ನಡೆಯುತ್ತಿದ್ದ ಮುಷ್ಕರ ಇಂದು ಕೂಡ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಮೊದಲ ಬಲಿಯಾಗಿದ್ದಾರೆ.

19 ವರ್ಷದ ಪೂಜಾ ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿ. ಈಕೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ಓದುತ್ತಿದ್ದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿರೋ ಪೂಜಾ ವಾರಕ್ಕೆ ಎರಡು ಬಾರಿ ಡಯಾಲಿಸಿಸ್ ಗೆ ಒಳಗಾಗುತ್ತಿದ್ದರು. ಆದ್ರೆ ವೈದ್ಯರ ಮುಷ್ಕರದಿಂದ ಡಯಾಲಿಸಿಸ್ ನಡೆದಿರಲಿಲ್ಲ.

ಇದರಿಂದಾಗಿ ಅನಾರೋಗ್ಯ ತೀವ್ರಗೊಂಡಿದ್ದು, ಪೂಜಾರನ್ನು ಚಿಕಿತ್ಸೆಗಾಗಿ ಪುತ್ತೂರು ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಆಸ್ಪತ್ರೆಯಲ್ಲಿ ತಜ್ಞರಿಲ್ಲದೇ ಹಾಗೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಪೂಜಾ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.

https://www.youtube.com/watch?v=8rzl4Fi8sog

https://www.youtube.com/watch?v=etOqW7PwH00

Share This Article
Leave a Comment

Leave a Reply

Your email address will not be published. Required fields are marked *